Featured

ಬೈಂದೂರು: ಹವಾಮಾನ ವೈಪರೀತ್ಯದ ಪರಿಣಾಮ ಅಲೆಗಳ ಏರಿಳಿತಕ್ಕೆ ಸಿಲುಕಿ ಮುಳುಗಿದ ಮೀನುಗಾರಿಕಾ ಬೋಟ್ :  ಐವರ ರಕ್ಷಣೆ – Vishwanews24

ಬೈಂದೂರು: ಹವಾಮಾನ ವೈಪರೀತ್ಯದ ಪರಿಣಾಮ ಅಲೆಗಳ ಏರಿಳಿತಕ್ಕೆ ಸಿಲುಕಿ ಮುಳುಗಿದ ಮೀನುಗಾರಿಕಾ ಬೋಟ್ :  ಐವರ ರಕ್ಷಣೆ

ಬೈಂದೂರು: ಹವಾಮಾನ ವೈಪರೀತ್ಯದ ಪರಿಣಾಮ ಅಲೆಗಳ ಏರಿಳಿತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಭಾಗಶಃ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ದುರ್ಘಟನೆ ಜಿಲ್ಲೆಯ ಶೀರೂರು ಎಂಬಲ್ಲಿ ಸಂಭವಿಸಿದೆ.

ಶೀರೂರಿನ ಮುಸ್ತಾಕ್ ಎಂಬುವರ ಬೀಬಿ ಅಮೀನ ಹೆಸರಿನ ಗಿಲ್ ನೆಟ್ ದೋಣಿಯಲ್ಲಿ ಐವರು ಮೀನುಗಾರರು ನಿನ್ನ ಮಧ್ಯಾಹ್ನ ಶೀರೂರಿನಿಂದ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಕಡಲಬ್ಬರಕ್ಕೆ ಸಿಲುಕಿ ದೋಣಿ ಎರಡು ಭಾಗವಾಗಿದೆ ಎಂದು ತಿಳಿದುಬಂದಿದೆ.

ಇದರಲ್ಲಿ ಸಿಲುಕಿಕೊಂಡಿದ್ದ ಮೀನುಗಾರರು ತಕ್ಷಣ ವೈರ್‌ಲೆಸ್ ಮೂಲಕ ಸಂಬಂಧಪಟ್ಟರಿಗೆ ಮಾಹಿತಿ ನೀಡಿದ್ದಾರೆ.

ಅಪಾಯದಲ್ಲಿ ಸಿಲುಕಿದ್ದ ಬೋಟಿನಲ್ಲಿದ್ದ ಶೀರೂರು ಕಳುಹಿತ್ತು ಮುಫ್ಲಾಕ್ (52), ಅಶ್ರಫ್ (37), ಶಬೀರ್ (50), ಗೌಸಿಯಾ ಮೊಹಲ್ಲಾದ ಅಬೂಬಕ್ಕರ್ (55), ಬೊಂಬ ಮೀರಾ (47) ಎಂಬುವರನ್ನು ರಕ್ಷಿಸಿ ತೀರಕ್ಕೆ ಕರೆದು ಕೊಂಡು ಬರಲಾಯಿತು ಎಂದು ತಿಳಿದುಬಂದಿದೆ.

ದುರ್ಘಟನೆಯಿಂದ ಸುಮಾರು ಹತ್ತು ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago