Featured

ಬೈಕಂಪಾಡಿ : ಹೋರಿಯ ಕಣ್ಣಿಗೆ ಕುಕ್ಕುತ್ತಿದ್ದ ಕೊಂಬು ಕಡಿದು ಯಶಸ್ವೀ ಚಿಕಿತ್ಸೆ ನೀಡಿದ ಬಜರಂಗ ದಳ ಯುವಪಡೆ – Vishwanews24

ಬೈಕಂಪಾಡಿ : ಹೋರಿಯ ಕಣ್ಣಿಗೆ ಕುಕ್ಕುತ್ತಿದ್ದ ಕೊಂಬು ಕಡಿದು ಯಶಸ್ವೀ ಚಿಕಿತ್ಸೆ ನೀಡಿದ ಬಜರಂಗ ದಳ ಯುವಪಡೆ

ಮಂಗಳೂರು : ಅದು ಒಂದು ಮೂಕ ಜೀವಿ..ಕಳೆದ ಕೆಲ ವರ್ಷಗಳಿಂದ ತನ್ನ ಒಡಲಲ್ಲಿ ಅಗಾಧ ನೋವನ್ನು ಇಟ್ಟುಕೊಂಡು ನರಕ ಯಾತನೆ ಪಡುತಿತ್ತು. ನೇರವಾಗಿರಬೇಕಾಗಿದ್ದ ಕೊಂಬು ಬಾಗಿ ಕಣ್ಣಿಗೆ ಕುಕ್ಕಿ ಅದರಿಂದ ಗಾಯಗೊಂಡು ನೋವಿನಿಂದ ಬಳಲುತ್ತಾ ಸದಾ ಕಣ್ಣೀರು ಸುರಿಸುತ್ತಲೇ ಅಸಹಾಯಕ ಸ್ಥಿತಿಯಲ್ಲಿತ್ತು ಆಜೀವ.

ಆದರೆ ಇದೀಗ ಸಾಮಾಜಿಕ ಕಾರ್ಯಕರ್ತೆಯ ಕರೆಗೆ ಸ್ಪಂದಿಸಿದ ಬಜರಂಗದಳ ಉತ್ಸಾಹಿ ಯುವಕಪಡೆ ಆ ಮುಗ್ದ ಜೀವಿಯ ಕಣ್ಣೀರು ಓರೆಸುವ ಕಾರ್ಯ ಮಾಡಿದೆ.

ಇದರ ಹೆಸರು ರಾಜ. ಮಂಗಳೂರು ಹೊರವಲಯದ ಪಣಂಬೂರು- ಬೈಕಂಪಾಡಿ ಪ್ರದೇಶಗಳಲ್ಲಿ ಕಳೆದ ಕೆಲ ವರ್ಷಗಳಿಂದ ಬೀಡು ಬಿಟ್ಟಿರುವ ಈ ಹೋರಿ ಇತ್ತೀಚಿನ ದಿನಗಳಿಂದ ತೀರ ನರಕಮಯ ಯಾತನೆಯನ್ನು ಅನುಭವಿಸುತ್ತಿತ್ತು.

ತನ್ನ ತಲೆಯಲ್ಲಿ ನೇರವಾಗಿ ಬೆಳೆಯ ಬೇಕಾಗಿದ್ದ ಒಂದು ಕೊಂಬು ಯಾವುದೋ ಅಪಘಾತದಲ್ಲಿ ಬಾಗಿ ತನ್ನದೇ ಕಣ್ಣಿಗೆ ಕುಕ್ಕುತ್ತಿತು. ಇದರಿಂದ ಉಂಟಾಗುತಿದ್ದ ಅಗಾದ ನೋವನ್ನು ತಡೆಯಲಾಗದೇ ರಾಜ ಹೋರಿ ಅಸಾಹಾಯಕ ಸ್ಥಿತಿಯಲ್ಲಿ ಒದ್ದಾಡುತ್ತಿತು.

ಹಲವಾರು ಬಾರಿ ಸಾಮಾಜಿಕ ಜಾಲಾ ತಾಣ, ಮಾದ್ಯಮಗಳ ಮೂಲಕ ಮಾಡಿದ ಮನವಿಗೆ ಹೋರಿಯನ್ನು ಈ ಯಾತನೆಯಿಂದ ಮುಕ್ತಿ ಮಾಡುವ ಪ್ರಯತ್ನಗಳನ್ನು ಮಾಡಲಾಗಿತ್ತಾದರೂ ಅದು ಸಫಲತೆ ಕಂಡಿರಲಿಲ್ಲ.ಆದರೆ ಈ ಹೋರಿ ಯಾರನ್ನೂ ಹತ್ತಿರ ಹೋಗಲು ಬಿಡುತ್ತಿರಲಿಲ್ಲವಾದ್ದರಿಂದ ಅದನ್ನು ಹಿಡಿಯುವುದು ಒಂದು ಸವಾಲಾಗಿತ್ತು.ಹಾಗಾಗಿ ಅದರ ಬೆಂಡಾದ ಕೊಂಬು ಸಮಸ್ಯಾತ್ಮಕವಾಗಿಯೇ ಉಳಿದಿತ್ತು. ಈ ಮೂಕ ಪ್ರಾಣಿಯ ವೇದನೆ ಸಾಮಾಜಿಕ ಜಾಲ ತಾಣದಲ್ಲಿ ಇದೀಗ ಮತ್ತೆ ವೈರಲ್‌ ಆಗಿತ್ತು.

ಪ್ರಾಣಿ ಪ್ರಿಯೆ ಉಷಾ ಸುವರ್ಣರು ಹೋರಿಯ ಸಹಾಯಕ್ಕೆ ಜಾಲಾ ತಾಣಗಳ ಮೂಲಕ ಮನವಿ ಮಾಡಿದ್ದರು.ಇದಕ್ಕೆ ಸ್ಪಂದಿಸಿದ ಬಜರಂಗ ದಳ ಸಂಘಟನೆಯ ಕಾರ್ಯಕರ್ತರು , ಉತ್ಸಾಹಿ ಧೈರ್ಯವಂತ ಯುವಕರ ಪಡೆಯೊಂದಿಗೆ ಪಣಂಬೂರು- ಬೈಕಂಪಾಡಿ ಪ್ರದೇಶದಲ್ಲಿ ಮುಂಜಾನೆಯಿಂದ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಗ್ಗದ ಸಹಾಯದಿಂದ ಹೋರಿಯನ್ನು ಸೆರೆ ಹಿಡಿಯುವ ಸಾಹಸಕ್ಕೆ ಕೈ ಹಾಕಿ ಕೊನೆಗೂ ಯಶಸ್ವಿಯಾದರು.

ಪಶು ವೈದ್ಯರನ್ನು ಕರೆಸಿ ಅವರ ಸಹಾಯದಿಂದ ಹೊರಿಯ ನೋವಿಗೆ ಕಾರಣವಾಗಿದ್ದ ಕಣ್ಣಿಗೆ ಬಾಗಿದ್ದ ಕೊಂಬನ್ನು ಕತ್ತರಿಸಿ ಯಶಸ್ವೀ ಚಿಕಿತ್ಸೆ ಒದಗಿಸಿದರು.

ಪಶು ಸಂಗೋಪನಾ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪ ನಿರ್ದೇಶಕ ಡಾ। ಅರುಣ್‌ ಶೆಟ್ಟಿ ಅವರ ನಿರ್ದೇಶನದಲ್ಲಿ ನಿವೃತ್ತ ಪಶು ವೈದ್ಯಾಧಿಕಾರಿ ಡಾ। ಸುರೇಶ್‌ ಮತ್ತು ಇಲಾಖೆಯ ಸೀನಿಯರ್‌ ಇನ್ಸ್‌ಪೆಕ್ಟರ್‌ ವಿಶ್ವನಾಥ ಕುಳಾಯಿ ಅವರು ಈ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು.

ಇದರಿಂದಾಗಿ ಈ ಬೀಡಾಡಿ ಬಸವ ಕಳೆದ ಕೆಲವು ವರ್ಷಗಳಿಂದ ಅನುಭವಿಸುತ್ತಿದ್ದ ನೋವಿನ ಸಮಸ್ಯೆಯಿಂದ ಮುಕ್ತಿ ದೊರೆತಿದೆ.ಬಜರಂಗ ದಳದ ಯುವಕರ ಪ್ರಾಣಿ ಪ್ರೇಮಕ್ಕೆ ಸಾರ್ವತ್ರಿಕ ಮೆಚ್ಚುಗೆ ವ್ಯಕ್ತವಾಗಿದೆ.

Vishwa News 24

Recent Posts

ಎಸ್‌ ಎಸ್‌ ಎಲ್‌ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ – vishwanews24

ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…

7 minutes ago

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …

22 minutes ago

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ   ಉಡುಪಿ : 2026 ನೇ ಸಾಲಿನ…

42 minutes ago

ಉಡುಪಿ: ಯುವತಿ ನಾಪತ್ತೆ – vishwanews24

ಉಡುಪಿ: ಯುವತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್…

59 minutes ago

ಉಡುಪಿ : ಏ. 17 ರಂದು ನೇರ ಸಂದರ್ಶನ – vishwanews24

ಉಡುಪಿ : ಏ. 17 ರಂದು ನೇರ ಸಂದರ್ಶನ      ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ…

1 hour ago

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು – vishwanews24

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು   ಉಡುಪಿ : ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ…

1 hour ago