ಬೈಕ್ ಸವಾರನಿಗೆ ರಾಂಗ್ ಸೈಡಿಂದ ಬಂದು ಡಿಕ್ಕಿ ಹೊಡೆದ ಅಂಬ್ಯುಲೆನ್ಸ್ : ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು :vishwanews24

Featured, ಉಡುಪಿ

ಬೈಕ್ ಸವಾರನಿಗೆ ರಾಂಗ್ ಸೈಡಿಂದ ಬಂದು ಡಿಕ್ಕಿ ಹೊಡೆದ ಅಂಬ್ಯುಲೆನ್ಸ್ : ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾಪುವಿನಲ್ಲಿ ಮತ್ತೋರ್ವನನ್ನು ಬಲಿ ಪಡೆಯಿತು ಹೆದ್ದಾರಿಯ ಅರ್ಧಂಬರ್ಧ ಕಾಮಗಾರಿ

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರವಿವಾರ ಮಧ್ಯಾಹ್ನ ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯ ಮರು ಡಾಮರೀಕರಣ ಕಾಮಗಾರಿಯ ಕಾರಣದಿಂದಾಗಿ ಮಂಗಳೂರು- ಉಡುಪಿ ರಸ್ತೆಯಲ್ಲಿ ಏಕಮುಖ ಸಂಚಾರ ಮಾಡಲಾಗಿದ್ದು, ಆಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಆಂಬ್ಯುಲೆನ್ಸ್ ನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

 

Leave a Reply