Featured

ಬೊಮ್ಮಾಯಿ ಖಾಲಿ ಡಬ್ಬಾ, ರಾಜ್ಯವನ್ನು ನರಕ ಮಾಡಿದ್ದಾರೆ : ಸಿದ್ದರಾಮಯ್ಯ – Vishwanews24

ಬೊಮ್ಮಾಯಿ ಖಾಲಿ ಡಬ್ಬಾ, ರಾಜ್ಯವನ್ನು ನರಕ ಮಾಡಿದ್ದಾರೆ : ಸಿದ್ದರಾಮಯ್ಯ – Vishwanews24

ಬೆಂಗಳೂರು:ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ ಜೊತೆಗೆ ಪಕ್ಷಗಳ ಮಧ್ಯೆ ಪ್ರತಿಷ್ಠೆ, ಪ್ರಭಾವ, ಹಣಬಲ, ವೈಯಕ್ತಿಕ ಟೀಕೆ-ನಿಂದನೆಗಳು ನಡೆಯುತ್ತಿದ್ದು, ಇದು ಕೌರವರ, ಪಾಂಡವರ ಕದನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಾ ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಯಾರೇ ಗೆದ್ರೂ ಅವರ ಅಧಿಕಾರಾವಧಿ ಒಂದೂವರೇ ವರ್ಷ ಮಾತ್ರ. ಆದರೆ ಹಾನಗಲ್, ಸಿಂದಗಿ ಆಡಳಿತ ಮತ್ತು ವಿಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಸಿಎಂ ಬೊಮ್ಮಾಯಿಗೆ ಇದು ಮೊದಲ ಬೈ ಎಲೆಕ್ಷನ್ ಟೆಸ್ಟ್ ಆದರೆ, ವಿಪಕ್ಷಗಳ ಪಾಲಿಗೆ ಆಡಳಿತ ವಿರೋಧಿ ಅಲೆ ಎಷ್ಟಿದೆ ಎನ್ನುವುದನ್ನು ಪರೀಕ್ಷಿಸಿಕೊಳ್ಳಲು ಒದಗಿ ಬಂದಿರುವ ವೇದಿಕೆಯಾಗಿದೆ. ಹೀಗಾಗಿ ಗೆಲ್ಲಲೇಬೇಕು ಎಂಬ ಭರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಮಾತಿನ ಜಟಾಪಟಿ ನಡಿಯುತ್ತಿದೆ. ರಾಜಕೀಯ ನಾಯಕರು ನಿತ್ಯ ಭಾಷಣಗಳ ಮೂಲಕ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

ಹಾನಗಲ್ ಕ್ಷೇತ್ರದ ವಿಚಾರವಾಗಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮಧ್ಯೆ ಅಭಿವೃದ್ಧಿ ವಿಚಾರವಾಗಿ ಸವಾಲ್-ಪ್ರತಿಸವಾಲ್ ನಡೆದಿದೆ. ಹಾನಗಲ್‍ಗೆ ಏನ್ ಕೊಟ್ಟಿದ್ದಾರೆ ಅಂತ ಲೆಕ್ಕ ಕೇಳಿದ್ರೆ ಸಿದ್ದರಾಮಯ್ಯ ಓಡಿ ಹೋಗುತ್ತಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ನಾನು ಸಿಎಂ ಆದಾಗ ಹಾವೇರಿ ಜಿಲ್ಲೆಗೆ 2,400 ಕೋಟಿ ಕೊಟ್ಟಿದ್ದೇನೆ. ಮಿಸ್ಟರ್ ಬೊಮ್ಮಾಯಿ ಎರಡೂವರೆ ವರ್ಷದಲ್ಲಿ ನೀವೇನು ಏನು ಮಾಡಿದ್ದೀರಿ ಅಂತ ಲೆಕ್ಕ ಹೇಳ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು 15 ಲಕ್ಷ ಮನೆ ಕಟ್ಟಿಕೊಟ್ಟಿದ್ದೇವೆ. ನೀವು ಒಂದೇ ಒಂದು ಮನೆ ಕಟ್ಟಿಸಿಕೊಡೋಕೆ ಆಗಿಲ್ಲ. ಈ ವಿಚಾರದಲ್ಲಿ ಬೊಮ್ಮಾಯಿ ಜೊತೆ ಬಹಿರಂಗ ಚರ್ಚೆಗೆ ರೆಡಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇದಕ್ಕೆ ಕಾಗದದಲ್ಲಿ ಹೇಳಿದ್ರೇ ಸಾಕೇ? ಅದಕ್ಕೆ ದುಡ್ಡು ಇಡಬೇಕಲ್ಲಾ? ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದಕ್ಕೆ ಮತ್ತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಬಸವರಾಜ ಬೊಮ್ಮಾಯಿ ಖಾಲಿ ಡಬ್ಬಾ. ರಾಜ್ಯವನ್ನು ನರಕ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ,.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

8 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

10 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

11 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

11 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

11 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

11 hours ago