Featured

ಬೊಮ್ಮಾಯಿ ಖಾಲಿ ಡಬ್ಬಾ, ರಾಜ್ಯವನ್ನು ನರಕ ಮಾಡಿದ್ದಾರೆ : ಸಿದ್ದರಾಮಯ್ಯ – Vishwanews24

ಬೊಮ್ಮಾಯಿ ಖಾಲಿ ಡಬ್ಬಾ, ರಾಜ್ಯವನ್ನು ನರಕ ಮಾಡಿದ್ದಾರೆ : ಸಿದ್ದರಾಮಯ್ಯ – Vishwanews24

ಬೆಂಗಳೂರು:ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ ಜೊತೆಗೆ ಪಕ್ಷಗಳ ಮಧ್ಯೆ ಪ್ರತಿಷ್ಠೆ, ಪ್ರಭಾವ, ಹಣಬಲ, ವೈಯಕ್ತಿಕ ಟೀಕೆ-ನಿಂದನೆಗಳು ನಡೆಯುತ್ತಿದ್ದು, ಇದು ಕೌರವರ, ಪಾಂಡವರ ಕದನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಾ ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಯಾರೇ ಗೆದ್ರೂ ಅವರ ಅಧಿಕಾರಾವಧಿ ಒಂದೂವರೇ ವರ್ಷ ಮಾತ್ರ. ಆದರೆ ಹಾನಗಲ್, ಸಿಂದಗಿ ಆಡಳಿತ ಮತ್ತು ವಿಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಸಿಎಂ ಬೊಮ್ಮಾಯಿಗೆ ಇದು ಮೊದಲ ಬೈ ಎಲೆಕ್ಷನ್ ಟೆಸ್ಟ್ ಆದರೆ, ವಿಪಕ್ಷಗಳ ಪಾಲಿಗೆ ಆಡಳಿತ ವಿರೋಧಿ ಅಲೆ ಎಷ್ಟಿದೆ ಎನ್ನುವುದನ್ನು ಪರೀಕ್ಷಿಸಿಕೊಳ್ಳಲು ಒದಗಿ ಬಂದಿರುವ ವೇದಿಕೆಯಾಗಿದೆ. ಹೀಗಾಗಿ ಗೆಲ್ಲಲೇಬೇಕು ಎಂಬ ಭರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಮಾತಿನ ಜಟಾಪಟಿ ನಡಿಯುತ್ತಿದೆ. ರಾಜಕೀಯ ನಾಯಕರು ನಿತ್ಯ ಭಾಷಣಗಳ ಮೂಲಕ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

ಹಾನಗಲ್ ಕ್ಷೇತ್ರದ ವಿಚಾರವಾಗಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮಧ್ಯೆ ಅಭಿವೃದ್ಧಿ ವಿಚಾರವಾಗಿ ಸವಾಲ್-ಪ್ರತಿಸವಾಲ್ ನಡೆದಿದೆ. ಹಾನಗಲ್‍ಗೆ ಏನ್ ಕೊಟ್ಟಿದ್ದಾರೆ ಅಂತ ಲೆಕ್ಕ ಕೇಳಿದ್ರೆ ಸಿದ್ದರಾಮಯ್ಯ ಓಡಿ ಹೋಗುತ್ತಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ನಾನು ಸಿಎಂ ಆದಾಗ ಹಾವೇರಿ ಜಿಲ್ಲೆಗೆ 2,400 ಕೋಟಿ ಕೊಟ್ಟಿದ್ದೇನೆ. ಮಿಸ್ಟರ್ ಬೊಮ್ಮಾಯಿ ಎರಡೂವರೆ ವರ್ಷದಲ್ಲಿ ನೀವೇನು ಏನು ಮಾಡಿದ್ದೀರಿ ಅಂತ ಲೆಕ್ಕ ಹೇಳ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು 15 ಲಕ್ಷ ಮನೆ ಕಟ್ಟಿಕೊಟ್ಟಿದ್ದೇವೆ. ನೀವು ಒಂದೇ ಒಂದು ಮನೆ ಕಟ್ಟಿಸಿಕೊಡೋಕೆ ಆಗಿಲ್ಲ. ಈ ವಿಚಾರದಲ್ಲಿ ಬೊಮ್ಮಾಯಿ ಜೊತೆ ಬಹಿರಂಗ ಚರ್ಚೆಗೆ ರೆಡಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇದಕ್ಕೆ ಕಾಗದದಲ್ಲಿ ಹೇಳಿದ್ರೇ ಸಾಕೇ? ಅದಕ್ಕೆ ದುಡ್ಡು ಇಡಬೇಕಲ್ಲಾ? ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದಕ್ಕೆ ಮತ್ತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಬಸವರಾಜ ಬೊಮ್ಮಾಯಿ ಖಾಲಿ ಡಬ್ಬಾ. ರಾಜ್ಯವನ್ನು ನರಕ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ,.

Vishwa News 24

Recent Posts

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

11 minutes ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

21 minutes ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

30 minutes ago

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

19 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

20 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

20 hours ago