Featured

ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಬಿಜೆಪಿಗೆ ಪೂರ್ಣ ಬಹುಮತ: ಅಮಿತ್‌ ಶಾ -Vishwanews24

ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಬಿಜೆಪಿಗೆ ಪೂರ್ಣ ಬಹುಮತ: ಅಮಿತ್‌ ಶಾ -Vishwanews24

ದಾವಣಗೆರೆ: ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಕೆಲಸ ಮಾಡಿತ್ತು. ಅವರು ಸ್ವಯಂ ಆಗಿ ಬೊಮ್ಮಾಯಿ ಅವರಿಗೆ ಅಧಿಕಾರ ಬಿಟ್ಟುಕೊಟ್ಟಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದರು.

₹3 ಕೋಟಿ ವೆಚ್ಚದ ಗಾಂಧಿಭವನ, ₹15 ಕೋಟಿ ವೆಚ್ಚದ ಪೊಲೀಸ್‌ ಪಬ್ಲಿಕ್‌ ವಸತಿ ಶಾಲೆ, ₹15 ಕೋಟಿ ವೆಚ್ಚದ ಪೊಲೀಸ್‌ ಕ್ವಾರ್ಟರ್ಸ್‌ಗಳನ್ನು ವರ್ಚುವಲ್‌ ಮೂಲಕ ಉದ್ಘಾಟಿಸಿ, ಜಿಎಂಐಟಿ ಕೇಂದ್ರ ಗ್ರಂಥಾಲಯಕ್ಕೆ ಚಾಲನೆ ನೀಡಿ ಅವರು ಗುರುವಾರ ಜಿಎಂಐಟಿ ಆವರಣದಲ್ಲಿ ಮಾತನಾಡಿದರು.

ವಿಶ್ವವನ್ನೇ ಕಾಡಿದ ಕೊರೊನಾವನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿ ನಿರ್ವಹಿಸಿದೆ. ಬಡವರು, ಅಲೆಮಾರಿಗಳು, ದಲಿತರು, ಆದಿವಾಸಿಗಳ ಸಹಿತ ಸಂಕಷ್ಟಕ್ಕೆ ಸಿಲುಕಿದ್ದ ಎಲ್ಲರ ನೆರವಿಗೆ ಸರ್ಕಾರ ಬಂದಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ, ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ಆರ್‌. ನಿರಾಣಿ, ಕೃಷಿ ಸಚಿವ ಬಿ.ಸಿ. ಪಾಟೀಲ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್‌.ಎ. ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ, ಎಂ.ಪಿ ರೇಣುಕಾಚಾರ್ಯ, ಎಸ್‌.ವಿ, ರಾಮಚಂದ್ರಪ್ಪ, ಪ್ರೊ. ಎನ್‌. ಲಿಂಗಣ್ಣ, ಕೊಂಡಜ್ಜಿ ಮೋಹನ್‌, ಕರುಣಾಕರ ರೆಡ್ಡಿ ಅವರೂ ಇದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

21 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

36 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago