Featured

ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ  – vishwanews24

ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ

ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್‌ರವರನ್ನು ಪಕ್ಷ ವಿರೋಧಿ ಚಟುವಟಿಕೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿರುತ್ತೇವೆ.

ಕಳೆದ ಹಲವು ವರ್ಷಗಳಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬೊಮ್ಮಾರಬೆಟ್ಟು ಗ್ರಾಮದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಸ್ಪಷ್ಟ ಬಹುಮತದಿಂದ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷದ ಕುತಂತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯರಲ್ಲಿ ಒಡಕು ಮೂಡಿಸಿ ಎರಡು ಬಾರಿ ಕಾಂಗ್ರೆಸ್ ಪಕ್ಷ ಹಿಂಬಾಗಿಲಿನಿಂದ ಆಡಳಿತ ನಡೆಸಿದ್ದು, ಗ್ರಾಮದ ಜನಸಾಮಾನ್ಯರಿಗೆ ತಿಳಿದ ವಿಚಾರ. ಅಂತೆಯೇ 2023ರ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಈ ತಂತ್ರ ವಿಫಲಗೊಳಿಸುವ ಸಲುವಾಗಿ ಉಚ್ಚಾಟಿತ ಸದಸ್ಯ ಮತ್ತು ಆತನೊಂದಿಗೆ ಇದ್ದ ಸದಸ್ಯರೊಂದಿಗೆ ಬೊಮ್ಮಾರಬೆಟ್ಟುವಿನ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ಪಡೆದಿರುತ್ತದೆ.

ಈ ಹೊಂದಾಣಿಕೆಯಿಂದ ಆತ ಉಪಾದ್ಯಕ್ಷನಾಗಿರುತ್ತಾನೆ. ಆದರೆ ಈತನನ್ನು ಈವರೆಗೂ ಪಕ್ಷಕ್ಕೆ ಮರುಸೇರ್ಪಡೆಗೊಳಿಸದೆ ಉಚ್ಚಾಟನೆಯನ್ನು ರದ್ದು ಮಾಡಿರುವುದಿಲ್ಲ ಮತ್ತು ಪಕ್ಷದ ಯಾವುದೇ ಜವಾಬ್ದಾರಿ ನೀಡಿರುವುದಿಲ್ಲ ಹಾಗಾಗಿ ಈತನ ಯಾವುದೇ ಕಾರ್ಯವೈಖರಿಗೆ ಬಿಜೆಪಿ ಪಕ್ಷ ಬೆಂಬಲಿಸುವುದಿಲ್ಲ ಮತ್ತು ಈತನೊಂದಿಗೆ ಪಂಚಾಯತ್‌ ಸದಸ್ಯ ಶಾಸಕರ ಕಚೇರಿಯಲ್ಲಿ ಕಾರ್ಯಾಚರಿಸುತ್ತಿದವನನ್ನು ಈ ಘಟನೆ ನಡೆದ ತಕ್ಷಣವೇ ಶಾಸಕರು ಕಚೇರಿಯಿಂದ ವಜಾಗೊಳಿಸಿರುತ್ತಾರೆ.

ದಿನಾಂಕ 01-09-2025 ರಂದು ಹಿರಿಯಡ್ಕ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದ ಸಂದರ್ಭ ಕೆಲವು ಕಾಂಗ್ರೆಸ್‌ನ ಸ್ಥಳೀಯ ನಾಯಕರು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಮಹಿಳಾ ಅಧ್ಯಕ್ಷರನ್ನು ನಿಂದಿಸುವುದು ಖಂಡನೀಯ ಇವತ್ತಿನ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಗ್ರಾಮ ಪಂಚಾಯತ್ ಸದಸ್ಯರಿರಬಹುದು ಮತ್ತು ಸ್ಥಳೀಯ ನಾಯಕರಿರಬಹುದು, ಸ್ಥಳೀಯವಾಗಿ ನಡೆಯುವ ಅವ್ಯವಹಾರದಲ್ಲಿ ಭಾಗಿಯಾಗಿರುವುದು ಸ್ಥಳೀಯವಾಗಿ ಗ್ರಾಮಸ್ಥರಿಗೆ ತಿಳಿದಿಲ್ಲವೆ ಆದರೂ ರೋಷಾವೇಶರಾಗಿ ವೇದಿಕೆಯಲ್ಲಿ ಮಾತನಾಡಿರುವುದು ಸ್ಥಳೀಯ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರು ಮಾಡುವ ಅವ್ಯವಹಾರದ ಬಗ್ಗೆ ಗಮನ ಹರಿಸಲಿ ಮತ್ತು ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶದ ಸಾಲ್ಯಾನ್ ಮತ್ತು ಕ್ಷೇತ್ರದ ಯಾರೇ ಸದಸ್ಯರ/ಕಾರ್ಯಯರ್ತರ ಈ ಅವ್ಯವಹಾರವನ್ನು ಬಿಜೆಪಿ ಪಕ್ಷ ಮತ್ತು ಶಾಸಕರು ಯಾವುದೇ ರೀತಿ ಬೆಂಬಲಿಸುವುದಿಲ್ಲ ಮತ್ತು ಉಗ್ರವಾಗಿ ಕಾಪು ಬಿಜೆಪಿ ಖಂಡಿಸುತ್ತದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

22 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

22 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

24 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

24 hours ago