ಜೋದ್ಪುರ : ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂ ದಂಡ ವಿಧಿಸಲಾಗಿದೆ.
ಸರ್ಕಾರದ ಪರ ವಕೀಲರು ಕನಿಷ್ಠ ಆರು ವರ್ಷಗಳ ಶಿಕ್ಷೆ ನೀಡುವಂತೆ ವಾದ ಮಂಡಿಸಿದ್ದರು. ಆದರೆ ಸಲ್ಮನ್ ಪರ ವಕೀಲರು ಶಿಕ್ಷೆಯ ಪ್ರಮಾಣ ಕಡಿಮೆಗೊಳಿಸುವಂತೆ ಮನವಿ ಮಾಡಿದ್ದು, ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು. ಸಲ್ಮಾನ್ ಜೊತೆ ಸೈಫ್ ಅಲಿ ಖಾನ್. ಟಬು, ಸೊನಾಲಿ ಬೇಂದ್ರೆ, ನೀಲಂ ಅವರ ವಿರುದ್ದವೂ ಪ್ರಕರಣ ದಾಖಲಾಗಿತ್ತು. ಇಂದು ಎಲ್ಲಾ ಆರೋಪಿಗಳೂ ಜೋದ್ಪುರ ನ್ಯಾಯಾಲಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಾಲಯ ಸಲ್ಮಾನ್ ಖಾನ್ ದೋಷಿ ಎಂದಿದ್ದು, ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದೆ.ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ದೇಲ್ ಕುಮಾರ್ ಖಾತ್ರಿ ವಿಚಾರಣೆ ನಡೆಸಿ, ತೀರ್ಪು ನೀಡಿದ್ದಾರೆ.
ಸಲ್ಮಾನ್ ಖಾನ್ ಹಾಗೂ ತಂಡ ಚಿತ್ರೀಕರಣಕ್ಕೆಂದು ರಾಜಸ್ಥಾನದಲ್ಲಿ ತಂಗಿದ್ದರು. ಈ ವೇಳೆ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣ ಮೃಗಗಳ ಗುಂಪು ಕಾಣಿಸಿದ್ದು, ಡ್ರೈವರ್ ಸೀಟಿನಲ್ಲಿದ್ದ ಸಲ್ಮಾನ್ ಗುಂಡು ಹಾರಿಸಿದ್ದರು. ಈ ವೇಳೆ ಎರಡು ಕೃಷ್ಣಮೃಗಗಳು ಸಾವಿಗೀಡಾಗಿದ್ದವು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…