ಜೋದ್ಪುರ : ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂ ದಂಡ ವಿಧಿಸಲಾಗಿದೆ.
ಸರ್ಕಾರದ ಪರ ವಕೀಲರು ಕನಿಷ್ಠ ಆರು ವರ್ಷಗಳ ಶಿಕ್ಷೆ ನೀಡುವಂತೆ ವಾದ ಮಂಡಿಸಿದ್ದರು. ಆದರೆ ಸಲ್ಮನ್ ಪರ ವಕೀಲರು ಶಿಕ್ಷೆಯ ಪ್ರಮಾಣ ಕಡಿಮೆಗೊಳಿಸುವಂತೆ ಮನವಿ ಮಾಡಿದ್ದು, ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು. ಸಲ್ಮಾನ್ ಜೊತೆ ಸೈಫ್ ಅಲಿ ಖಾನ್. ಟಬು, ಸೊನಾಲಿ ಬೇಂದ್ರೆ, ನೀಲಂ ಅವರ ವಿರುದ್ದವೂ ಪ್ರಕರಣ ದಾಖಲಾಗಿತ್ತು. ಇಂದು ಎಲ್ಲಾ ಆರೋಪಿಗಳೂ ಜೋದ್ಪುರ ನ್ಯಾಯಾಲಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಾಲಯ ಸಲ್ಮಾನ್ ಖಾನ್ ದೋಷಿ ಎಂದಿದ್ದು, ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದೆ.ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ದೇಲ್ ಕುಮಾರ್ ಖಾತ್ರಿ ವಿಚಾರಣೆ ನಡೆಸಿ, ತೀರ್ಪು ನೀಡಿದ್ದಾರೆ.
ಸಲ್ಮಾನ್ ಖಾನ್ ಹಾಗೂ ತಂಡ ಚಿತ್ರೀಕರಣಕ್ಕೆಂದು ರಾಜಸ್ಥಾನದಲ್ಲಿ ತಂಗಿದ್ದರು. ಈ ವೇಳೆ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣ ಮೃಗಗಳ ಗುಂಪು ಕಾಣಿಸಿದ್ದು, ಡ್ರೈವರ್ ಸೀಟಿನಲ್ಲಿದ್ದ ಸಲ್ಮಾನ್ ಗುಂಡು ಹಾರಿಸಿದ್ದರು. ಈ ವೇಳೆ ಎರಡು ಕೃಷ್ಣಮೃಗಗಳು ಸಾವಿಗೀಡಾಗಿದ್ದವು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…