ಜೋದ್ಪುರ : ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂ ದಂಡ ವಿಧಿಸಲಾಗಿದೆ.
ಸರ್ಕಾರದ ಪರ ವಕೀಲರು ಕನಿಷ್ಠ ಆರು ವರ್ಷಗಳ ಶಿಕ್ಷೆ ನೀಡುವಂತೆ ವಾದ ಮಂಡಿಸಿದ್ದರು. ಆದರೆ ಸಲ್ಮನ್ ಪರ ವಕೀಲರು ಶಿಕ್ಷೆಯ ಪ್ರಮಾಣ ಕಡಿಮೆಗೊಳಿಸುವಂತೆ ಮನವಿ ಮಾಡಿದ್ದು, ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು. ಸಲ್ಮಾನ್ ಜೊತೆ ಸೈಫ್ ಅಲಿ ಖಾನ್. ಟಬು, ಸೊನಾಲಿ ಬೇಂದ್ರೆ, ನೀಲಂ ಅವರ ವಿರುದ್ದವೂ ಪ್ರಕರಣ ದಾಖಲಾಗಿತ್ತು. ಇಂದು ಎಲ್ಲಾ ಆರೋಪಿಗಳೂ ಜೋದ್ಪುರ ನ್ಯಾಯಾಲಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಾಲಯ ಸಲ್ಮಾನ್ ಖಾನ್ ದೋಷಿ ಎಂದಿದ್ದು, ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದೆ.ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ದೇಲ್ ಕುಮಾರ್ ಖಾತ್ರಿ ವಿಚಾರಣೆ ನಡೆಸಿ, ತೀರ್ಪು ನೀಡಿದ್ದಾರೆ.
ಸಲ್ಮಾನ್ ಖಾನ್ ಹಾಗೂ ತಂಡ ಚಿತ್ರೀಕರಣಕ್ಕೆಂದು ರಾಜಸ್ಥಾನದಲ್ಲಿ ತಂಗಿದ್ದರು. ಈ ವೇಳೆ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣ ಮೃಗಗಳ ಗುಂಪು ಕಾಣಿಸಿದ್ದು, ಡ್ರೈವರ್ ಸೀಟಿನಲ್ಲಿದ್ದ ಸಲ್ಮಾನ್ ಗುಂಡು ಹಾರಿಸಿದ್ದರು. ಈ ವೇಳೆ ಎರಡು ಕೃಷ್ಣಮೃಗಗಳು ಸಾವಿಗೀಡಾಗಿದ್ದವು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…