Featured

ಬ್ಯಾಂಕಾಕ್​ನಲ್ಲಿ ಹೆಚ್ಚಿದ ವಾಯುಮಾಲಿನ್ಯ, ಜನರ ಕಣ್ಣು, ಮೂಗಲ್ಲಿ ರಕ್ತಸ್ರಾವ – Vishwanews24

ಬ್ಯಾಂಕಾಕ್,: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್​ನಲ್ಲಿ ವಾಯು ಮಾಲಿನ್ಯ ಅಪಾಯದ ಮಟ್ಟ ಮೀರಿದ್ದು, ಜನರ ಕಣ್ಣು, ಮೂಗಲ್ಲಿ, ಬಾಯಲ್ಲಿ ರಕ್ತಸ್ರಾವ, ಜನರ ಕಣ್ಣುಗಳು ರಕ್ತವರ್ಣಕ್ಕೆ ತಿರುಗುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ ..

ಗಾಳಿಯಲ್ಲಿರುವ ವಿಷಕಾರಿ ಧೂಳಿನ ಕಣಗಳ ಪ್ರಮಾಣ PM 2.5 ಅಪಾಯ ಮಟ್ಟ ಮುಟ್ಟಿದೆ. ಬ್ಯಾಂಕಾಕಿನ 41ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಮಟ್ಟ ಸುರಕ್ಷಿತ ಮಟ್ಟ ಮೀರಿರುವುದು ಜನರಿಗೆ ತೊಂದರೆ ಉಂಟಾಗಲು ಕಾರಣ ಎಂದು ಥಾಯ್ಲೆಂಡ್​ನ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. PM 2.5ನಲ್ಲಿ ಧೂಳು, ಹೊಗೆ, ಮಾಲಿನ್ಯಯುಕ್ತ ದ್ರವ ಪದಾರ್ಥಗಳನ್ನು ಹೊಂದಿದ್ದು ವಾಯು ಗುಣಮಟ್ಟ ಇಂಡೆಕ್ಸ್ (ಎಕ್ಯೂಐ) ಪ್ರಮಾಣವನ್ನು ಅಧಿಕಾರಿಗಳು ಗಮನಿಸುತ್ತಿದ್ದಾರೆ.

ವಿಶ್ವದೆಲ್ಲೆಡೆ ನಗರ ಪ್ರದೇಶಗಳ ಮಾಲಿನ್ಯ ಪ್ರಮಾಣವನ್ನು ತಿಳಿಸುವ ಏರ್ ವಿಶ್ಯುವಲ್ ವೆಬ್ ತಾಣದ ಅಂಕಿ ಅಂಶದ ಪ್ರಕಾರ ಅತ್ಯಂತ ಮಾಲಿನ್ಯಯುಕ್ತ ನಗರಗಳ ಪಟ್ಟಿಯಲ್ಲಿ ನವದೆಹಲಿ ಮುಂದಿದ್ದರೆ, ಬ್ಯಾಂಕಾಕ್ 5ನೇ ಸ್ಥಾನದಲ್ಲಿದೆ.

ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ವಿರೋಧಿ ಅಭಿಯಾನ ಆರಂಭವಾಗಿದೆ. ಮಾಲಿನ್ಯದ ದುಷ್ಪರಿಣಾಮದಿಂದ ಪಾರಾಗಲು ಯಾವೆಲ್ಲ ರೀತಿಯ ಮಾಸ್ಕ್​ಗಳನ್ನು ಧರಿಸುವುದು ಸುರಕ್ಷಿತ ಎಂಬ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರಲು ಥಾಯ್ಲೆಂಡ್ ಸರ್ಕಾರವು ಮೋಡ ಬಿತ್ತನೆ ಮಾಡಿ ಕೃತಕ ಮಳೆ ಉಂಟು ಮಾದಲು ಯತ್ನಿಸಿತ್ತು. ಈ ಮೂಲಕದ ಮಾಲಿನ್ಯಕ್ಕೆ ಕಾರಣವಾದ ಸೂಕ್ಷ್ಮ ಮಾಲಿನ್ಯಕಾರಕಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಸರ್ಕಾರದ ಉದ್ದೇಶವಾಗಿತ್ತು. ಆದರೆ, ಮೋಡ ಬಿತ್ತನೆ ಯತ್ನ ವಿಫಲವಾಗಿದೆ. ಟ್ಯಾಂಕರ್​ಗಳನ್ನು ಬಳಸಿ ಮುಗಿಲೆತ್ತರಕ್ಕೆ ನೀರು ಸಿಡಿಸುವ ಪ್ರಯತ್ನವೂ ಕೈಕೊಟ್ಟಿದೆ. ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡುವುದು ಅನಿವಾರ್ಯವಾಗಿದೆ.

Vishwa News 24

Recent Posts

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

10 minutes ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

14 minutes ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago