ನವದೆಹಲಿ: ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲವನ್ನು ಕಟ್ಟದೆ ವಿದೇಶಕ್ಕೆ ಪಲಾಯನ ಮಾಡಿ ಸದ್ಯ ಲಂಡನ್ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೋರ್ಟ್ ಕೇಸನ್ನು ಎದುರಿಸುತ್ತಿರುವ ಮದ್ಯ ದೊರೆ ವಿಜಯ್ ಮಲ್ಯ, ಇದರಿಂದ ಉಂಟಾದ ನಷ್ಟಕ್ಕೇ ಬ್ಯಾಂಕ್ ನಿಂದ ಪಡೆದ ಸಾಲದ ಹಣ ಖರ್ಚಾಗಿತ್ತು. ಆದರೆ ಶೇ.100 ರಷ್ಟು ಮೂಲ ಹಣವನ್ನು ಬ್ಯಾಂಕ್ ಗಳಿಗೆ ಮರುಪಾವತಿ ಮಾಡಲು ಸಿದ್ಧನಿದ್ದೇನೆ ದಯವಿಟ್ಟು ತೆಗೆದುಕೊಳ್ಳಿ” ಎಂದು ವಿಜಯ್ ಮಲ್ಯ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ. .
ನಾನು ಬ್ಯಾಂಕ್ ಹಣದೊಂದಿಗೆ ಪರಾರಿಯಾಗಿದ್ದೀನಿ ಅಂತ ಮಾಧ್ಯಮದವರು ಹಾಗೂ ರಾಜಕಾರಣಿಗಳು ಪದೇ ಪದೇ ಹೇಳ್ತಿದ್ದಾರೆ. ಇದೆಲ್ಲಾ ಸುಳ್ಳು. ನಾನು ಕರ್ನಾಟಕ ಹೈಕೋರ್ಟ್ ಮುಂದೆ, ಸೆಟಲ್ಮೆಂಟ್ ಆಫರ್ ಮಾಡಿದ್ದನ್ನು ಯಾಕೆ ಹೇಳ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ..
ನನಗೆ ನ್ಯಾಯೋಚಿತ ವಿಚಾರಣೆಯ ಅವಕಾಶವನ್ನು ಯಾಕಾಗಿ ನೀಡಲಾಗುತ್ತಿಲ್ಲ. ಆ ಬಗ್ಗೆ ನನಗೆ ದುಃಖವಿದೆ; ನನ್ನ ಬ್ಯಾಂಕ್ ಸಾಲದ ಶೇ.100 ಅಸಲು ಮೊತ್ತವನ್ನು ತೀರಿಸುವ ನನ್ನ ಈ ಪ್ರಸ್ತಾವವನ್ನು ಕರ್ನಾಟಕ ಹೈಕೋರ್ಟ್ ಮುಂದೆ ಮಂಡಿಸಬೇಕೆಂದು ನಾನು ಕೋರುತ್ತೇನೆ” ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…