ಪಡುಬಿದ್ರಿ,: ಸೆಪ್ಟೆಂಬರ್ ೨ರಂದು ಪಡುಬಿದ್ರಿ ಕೆಳಗಿನ ಪೇಟೆಯಲ್ಲಿರುವ ಬ್ಯಾಂಕ್ನ ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಸಮೀಪದಲ್ಲಿದ್ದ ಚಿನ್ನದ ಅಂಗಡಿ ಹಾಗೂ ಮೊಬೈಲ್ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿದ 5 ಜನ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಭಾನುವಾರ ಬಂಧಿಸಿದ್ದಾರೆ.
ಸುಭಾಷ್ ಭೀಮರಾವ್ ಕಾಳೆ(26), ಶಂಕರ್ ಲಗಮನ್ ಕಾಳೆ(37), ಸುಭಾಷ್ ಭಾಸ್ಕರ ಕಾಳೆ(27), ಕಾಳಿದಾಸ ಭಾಸ್ಕರ ಕಾಳೆ(31), ಸುನೀಲ ನಾನಾ ಕಾಳೆ(27) ಬಂಧಿತ ಆರೋಪಿಗಳು. ಬಂಧಿತರಿಂದ ಆರು ಮೊಬೈಲ್ಗಳು ಹಾಗೂ ಕೃತ್ಯಕ್ಕೆ ಬಳಸಿದ ಚಾಕುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳೆಲ್ಲ ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕಲಾಂಬ್ ತಾಲೂಕಿನವರಾಗಿದ್ದಾರೆ. ಮಹಾರಾಷ್ಟ್ರದಿಂದ ಎರಡು ಲಾರಿಗಳಲ್ಲಿ ಸರಕು ತಂದು ಮಂಗಳೂರಿಗೆ ತಲುಪಿಸಿ ಹಿಂದಿರುಗುವ ವೇಳೆ ಈ ಕೃತ್ಯವೆಸಗಿದ್ದಾರೆ.
ಆರೋಪಿಗಳು ಮಹಾರಾಷ್ಟ್ರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್, ಪಡುಬಿದ್ರಿ ಎಸ್ಐ ಸತೀಶ್, ಸಿಬ್ಬಂದಿ ಸುಧಾಕರ್, ರಾಜೇಶ್, ಪ್ರವೀಣ್ ಕುಮಾರ್ ಸಂದೀಪ್, ಪ್ರಕಾಶ್ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…