Featured

ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

ನವದೆಹಲಿ,: ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್ಲಾ ಬ್ಯಾಂಕ್‌ಗಳು ಮಾರ್ಚ್ 27ರಿಂದ ಏಪ್ರಿಲ್ 4ರ ನಡುವೆ ಬರೋಬ್ಬರಿ ಏಳು ದಿನ ಮುಚ್ಚಿರಲಿದೆ. ಹೀಗಾಗಿ ಬ್ಯಾಂಕ್ ಸಂಬಂಧಿ ಏನೇ ಕೆಲಸವಿದ್ದರೂ ಈ ದಿನಾಂಕಗಳ ಮುಂಚಿತವಾಗಿ ಮಾಡುವುದು ಒಳಿತು.

ಮಾರ್ಚ್ 27 ರಿಂದ ಮಾರ್ಚ್ 29ರವರೆಗೆ ಬ್ಯಾಂಕ್ ಸತತ ಮೂರು ದಿನ ಬಂದ್ ಇರಲಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್‌ನಲ್ಲಿನ ಬ್ಯಾಂಕ್ ರಜಾ ವಿವರಗಳ ಪ್ರಕಾರ, ಬ್ಯಾಂಕುಗಳಿಗೆ ಹೋಳಿ ಹಬ್ಬದ ಕಾರಣ ಮಾರ್ಚ್ 29 ರಂದು ರಜೆ ಇದೆ. ಮಾರ್ಚ್ 30 ರಂದು ಪಾಟ್ನಾದಲ್ಲಿ ಮಾತ್ರ ಬ್ಯಾಂಕುಗಳನ್ನು ಮುಚ್ಚಲಾಗುವುದು ಎಂದು ಆರ್‌ಬಿಐ ತಿಳಿಸಿದೆ. ಇದರ ನಡುವಿನ ಅವಧಿಯಲ್ಲಿ, ಅಂದರೆ ಮಾರ್ಚ್ 30 ಮತ್ತು ಏಪ್ರಿಲ್ 3 ರಂದು ಮಾತ್ರ ಕೇವಲ ಎರಡು ದಿನಗಳವರೆಗೆ ಬ್ಯಾಂಕುಗಳು ತೆರೆಯುತ್ತವೆ.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿಯ ಜೀವ ಹಾಗೂ ಮಾನ ರಕ್ಷಣೆಗೆ ಬದ್ಧನಾಗಿದ್ದೇನೆ : ರಮೇಶ್ ಕುಮಾರ್ -Vishwanews24

ಮಾರ್ಚ್ 31 ರಂದು, ಹಣಕಾಸು ವರ್ಷದ ಮುಕ್ತಾಯದ ಕೊನೆಯ ದಿನದ ಕಾರಣ ಬ್ಯಾಂಕ್ ನಲ್ಲಿ ಸಾರ್ವಜನಿಕ ಸೇವೆಗಳಿಗೆ ಅವಕಾಶವಿರುವುದಿಲ್ಲ. ಇದಲ್ಲದೆ ಹಣಕಾಸು ವರ್ಷದ ಅಂತ್ಯದ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಬ್ಯಾಂಕುಗಳಿಗೆ ರಜೆ ಇರಲಿದೆ . ಏಪ್ರಿಲ್ 2 ರಂದು, ಗುಡ್ ಪ್ರೈಡೇಯ ಪ್ರಯುಕ್ತ ಸರ್ಕಾರಿ ರಜೆ ಇದೆ. ಏಪ್ರಿಲ್ 4 ಭಾನುವಾರವಾಗಿದೆ.

ಎಲ್ಲಾ ಬ್ಯಾಂಕ್ ರಜಾದಿನಗಳಲ್ಲಿ ಗ್ರಾಹಕರಿಗೆ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳು ತೆರೆದಿರುತ್ತವೆ ಎಂದು ಆರ್ ಬಿ ಐ ತಿಳಿಸಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago