Featured

ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ : ಸಿದ್ದರಾಮಯ್ಯ ವಾಗ್ದಾಳಿ – Vishwanews24

ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ ಅವರು. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ.

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ ಎಂದರು.

ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ?

ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಆರೋಪಿಸಿದರು.

ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ ಎಂದರು.

ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ಹೇಳಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago