Featured

ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಕೊನೆಗೂ ಬಂಧಮುಕ್ತ; ಇಂದು ಸ್ವದೇಶಕ್ಕೆ – vishwanews24

ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಕೊನೆಗೂ ಬಂಧಮುಕ್ತ; ಇಂದು ಸ್ವದೇಶಕ್ಕೆ

ಕಡಬ: ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧಮುಕ್ತನಾಗಿದ್ದು, ಸೋಮವಾರ (ನ. 20) ಸ್ವದೇಶಕ್ಕೆ ಆಗಮಿಸಲಿದ್ದಾರೆ.

ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ.

ಪದೋನ್ನತಿ ಪಡೆದು ವಿದೇಶಕ್ಕೆ ತೆರಳಿದ್ದರು

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ 2022ರಲ್ಲಿ ತೆರಳಿದ್ದರು. ಅಲ್ಲಿ ಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪೆನಿಯಲ್ಲಿದ್ದರು. 2022ರ ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

ಯಾಕೆ ಜೈಲು ವಾಸ?

ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂ ದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆ ಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರ ಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀ ಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಂಧನವಾಗಿರುವ ಬಗ್ಗೆ ಚಂದ್ರಶೇಖರ್‌ ಅವರ ಗೆಳೆಯರು ಮನೆ ಯವರಿಗೆ ತಿಳಿಸಿದ್ದರು. ಜೈಲಿನಲ್ಲಿ ಇರುವ ವೇಳೆ ದಿನದಲ್ಲಿ ಕೇವಲ 2 ನಿಮಿಷ ಮಾತ್ರ ದೂರವಾಣಿ ಕರೆ ಮಾಡಲು ಚಂದ್ರಶೇಖರ್‌ ಅವರಿಗೆ ಅವಕಾಶ ನೀಡಲಾಗಿತ್ತು. ಅಲ್ಲಿನ ಸ್ನೇಹಿತರಿಗೂ ಅವರನ್ನು ಭೇಟಿಯಾಗಲು ಅವಕಾಶವಿರಲಿಲ್ಲ.

ಐತ್ತೂರು ಗ್ರಾಮದ ಮೂಜೂರು ನಿವಾಸಿ ದಿ| ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಗೆ ಚಂದ್ರ ಶೇಖರ್‌ ಕೊನೆಯ ಪುತ್ರ. ಅವರಿಗೆ ಜನವರಿ ಯಲ್ಲಿ ಊರಿನಲ್ಲಿ ಮದುವೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಮದುವೆಯ ದಿನಾಂಕವೂ ಅಂತಿಮವಾಗಿತ್ತು. ಆ ಸಿದ್ಧತೆ ಯಲ್ಲಿ ಇರುವಾಗಲೇ ಅವರ ಬಂಧನವಾಗಿತ್ತು. ಚಂದ್ರಶೇಖರ್‌ ಅವರ ಸ್ನೇಹಿತರು 10 ಲಕ್ಷ ರೂ. ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದರು. ಹಣ ಕಳೆದುಕೊಂಡ ಮಹಿಳೆಗೆ ಸುಮಾರು 6 ಲಕ್ಷ ರೂ. ಹಣವನ್ನು ಪಾವತಿಸಲಾಗಿತ್ತು. ಆದರೂ ಬಿಡುಗಡೆ ಸಾಧ್ಯವಾಗಿರಲಿಲ್ಲ, ಮಾಧ್ಯಮ ವರದಿಯ ಬಳಿಕ ಅಲ್ಲಿನ ಕಂಪೆನಿ ಎಚ್ಚೆತ್ತುಕೊಂಡು ನಿರಪರಾಧಿ ಚಂದ್ರಶೇಖರ್‌ ಅವರ ಬಿಡುಗಡೆಗೆ ಕೈಜೋಡಿಸಿತ್ತು. ಚಂದ್ರಶೇಖರ್‌ ಬಿಡುಗಡೆಗೆ ಮಡಿಕೇರಿಯ ಬಿ.ಆರ್‌.ಅರುಣ್‌ಕುಮಾರ್‌ ಹಾಗೂ ಮಂಗಳೂರಿನ ಕಬೀರ್‌ ನಿರಂತರ ಪ್ರಯತ್ನ ಮಾಡಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

10 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

11 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago