ಚೆನ್ನೈ: ನಟ ಕಮ್ ರಾಜಕಾರಣಿ ಕಮಲ್ ಹಾಸನ್, ಪ್ರಧಾನಿ ಮೋದಿ ಅವರಿಗೊಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಯುವತಿಯೊಬ್ಬರ ಮೇಲೆ ಬ್ಯಾನರ್ ಬಿದ್ದು, ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಬ್ಯಾನರ್ ಸಂಸ್ಕೃತಿ ಬಗ್ಗೆ ಸಿಡಿದೆದ್ದಿರುವ ಕಮಲ್ ಹಾಸನ್, ಬ್ಯಾನರ್ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ ಅಂತ ಪ್ರಧಾನಿಗೆ ಮನವಿ ಮಾಡಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಮುಂದಿನ ವಾರ ತಮಿಳುನಾಡಿನ ಐತಿಹಾಸಿಕ ನಗರ ಮಹಾಬಲಿಪುರಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಈ ಇಬ್ಬರು ನಾಯಕರ ಭೇಟಿ ವೇಳೆ ಬ್ಯಾನರ್ ಹಾಕಲು ಅವಕಾಶ ಮಾಡಿಕೊಡಿ ಅಂತ ತಮಿಳುನಾಡು ಸರ್ಕಾರ, ಹೈಕೋರ್ಟ್ ಮೆಟ್ಟಿಲೇರಿದೆ.
ಬ್ಯಾನರ್ ಸಂಸ್ಕೃತಿಯನ್ನ ಕೊನೆಗೊಳಿಸಲು ಮೊದಲ ಹೆಜ್ಜೆ ಇಡುವಲ್ಲಿ ನೀವು ಮೊದಲಿಗರಾಗಿ ಕಾರ್ಯ ನಿರ್ವಹಿಸಿದರೆ, ಅದು ತಮಿಳರ ಭಾವನೆಗಳ ಬಗ್ಗೆ ನಿಮ್ಮ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಅದು ನಿಮಗೆ ದೊಡ್ಡ ಪ್ರಚಾರವನ್ನು ಕೊಡುತ್ತದೆ ಅಂತಾ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…