ಚೆನ್ನೈ: ನಟ ಕಮ್ ರಾಜಕಾರಣಿ ಕಮಲ್ ಹಾಸನ್, ಪ್ರಧಾನಿ ಮೋದಿ ಅವರಿಗೊಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಯುವತಿಯೊಬ್ಬರ ಮೇಲೆ ಬ್ಯಾನರ್ ಬಿದ್ದು, ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಬ್ಯಾನರ್ ಸಂಸ್ಕೃತಿ ಬಗ್ಗೆ ಸಿಡಿದೆದ್ದಿರುವ ಕಮಲ್ ಹಾಸನ್, ಬ್ಯಾನರ್ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ ಅಂತ ಪ್ರಧಾನಿಗೆ ಮನವಿ ಮಾಡಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಮುಂದಿನ ವಾರ ತಮಿಳುನಾಡಿನ ಐತಿಹಾಸಿಕ ನಗರ ಮಹಾಬಲಿಪುರಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಈ ಇಬ್ಬರು ನಾಯಕರ ಭೇಟಿ ವೇಳೆ ಬ್ಯಾನರ್ ಹಾಕಲು ಅವಕಾಶ ಮಾಡಿಕೊಡಿ ಅಂತ ತಮಿಳುನಾಡು ಸರ್ಕಾರ, ಹೈಕೋರ್ಟ್ ಮೆಟ್ಟಿಲೇರಿದೆ.
ಬ್ಯಾನರ್ ಸಂಸ್ಕೃತಿಯನ್ನ ಕೊನೆಗೊಳಿಸಲು ಮೊದಲ ಹೆಜ್ಜೆ ಇಡುವಲ್ಲಿ ನೀವು ಮೊದಲಿಗರಾಗಿ ಕಾರ್ಯ ನಿರ್ವಹಿಸಿದರೆ, ಅದು ತಮಿಳರ ಭಾವನೆಗಳ ಬಗ್ಗೆ ನಿಮ್ಮ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಅದು ನಿಮಗೆ ದೊಡ್ಡ ಪ್ರಚಾರವನ್ನು ಕೊಡುತ್ತದೆ ಅಂತಾ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…