ಹೈದರಾಬಾದ್ : ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ ಹೈದರಾಬಾದ್ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ.
‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳ್ಲಾ’ ಮುಂತಾದ ಸಿನಿಮಾಗಳಲ್ಲಿ ಶೋಭಿತಾ ಅವರು ನಟಿಸಿದ್ದಾರೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದರು. ಇನ್ನು ಶೋಭಿತಾ ಅವರು ಮದುವೆ ಬಳಿಕ ಇಂಡಸ್ಟ್ರಿಯಿಂದ ದೂರ ಉಳಿದಿದ್ದರು.
ಮರಣೋತ್ತರ ಪರೀಕ್ಷೆ ನಂತರ ಶೋಭಿತಾ ಅವರ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ. ಇನ್ನು ನಟಿ ಶೋಭಿತಾ ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…