ಬ್ರಹ್ಮಾವರ: ಜನರಿಂದ ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸುತ್ತಿರುವ ವೃದ್ಧೆಯೊಬ್ಬರು ಭಿಕ್ಷಾಟನೆಯಿಂದ ಬಂದ ಹಣವನ್ನು ಸಂಗ್ರಹಿಸಿ ಒಂದು ಲಕ್ಷ ರೂಪಾಯಿಗಳನ್ನು ಸಾಲಿಗ್ರಾಮದಲ್ಲಿರುವ ಗುರುನರಸಿಂಹ ದೇವಸ್ಥಾನಕ್ಕೆ ನೀಡಿದ್ದಾರೆ.
ಬಿಕ್ಷುಕಿ ಅಶ್ವತಮ್ಮ(80) ಕುಂದಾಪುರ ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಾಂಚೋಗೋಡು ಮೂಲದವರಾಗಿದ್ದು, ಸ್ವಾಮಿ ಅಯ್ಯಪ್ಪನ ಕಟ್ಟಾ ಭಕ್ತರಾಗಿದ್ದಾರೆ ಮತ್ತು ಪ್ರತಿವರ್ಷ ಹಲವಾರು ತಿಂಗಳುಗಳ ಕಾಲ ಸಾಂಪ್ರದಾಯಿಕ ಅಯ್ಯಪ್ಪ ಮಾಲಾ ಧರಿಸುತ್ತಾರೆ. ಅವರು ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡಿ ಸಂಗ್ರಹಿಸುವ ಹಣವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಕೊಡುತ್ತಾರೆ. ತನ್ನ ಸ್ವಂತ ಕುಟುಂಬ ಬಡತನದಲ್ಲಿದ್ದರು ಹಣವನ್ನು ಉಳಿತಾಯ ಮಾಡಿ ದಾನ ಮಾಡುತ್ತಾರೆ.
ಕೊರೊನಾ ಸೋಂಕು ದೂರವಾಗಿ ಜಗತ್ತು ಕಲ್ಯಾಣ ರಾಜ್ಯವಾಗಬೇಕು ಎಂಬ ಪ್ರಾರ್ಥನೆಯೊಂದಿಗೆ ಅವರು ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ ದಾನ ಮಾಡಿದ್ದು, ಈ ಹಣವನ್ನು ದೇವಾಲಯವು ತನ್ನ ಭಕ್ತರಿಗೆ ನೀಡುತ್ತಿರುವ ಊಟಕ್ಕೆ ಬಳಸಬೇಕೆಂದು ಅವರು ವಿನಂತಿಸಿದ್ದಾರೆ.
ಅಶ್ವಥಮ್ಮ ಅವರು ಕಾಂಚೋಗೋಡು ದೇವಸ್ಥಾನಕ್ಕೆ 1.5 ಲಕ್ಷ ರೂ., ಪಂಪ ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ, ಪೋಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1.5 ಲಕ್ಷ ರೂಗಳನ್ನು ಕೂಡ ದೇಣಿಗೆ ನೀಡಿದ್ದಾರೆ.
ಸಾಲಿಗ್ರಾಮ ದೇವಸ್ಥಾನಕ್ಕೆ ದೇಣಿಗೆಯನ್ನು ಹಸ್ತಾಂತರಿಸಿದಾಗ ಸಾಲಿಗ್ರಾಮ ದೇವಾಲಯದ ಅರ್ಚಕ ವೇದಮೂರ್ತಿ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ.ನಾಗರಾಜ ಅವರು ದೇವಾಲಯದ ಪ್ರಸಾದವನ್ನು ಪ್ರಸ್ತುತಪಡಿಸುವ ಮೂಲಕ ಗೌರವಿಸಿದರು.
ಉಡುಪಿ : ನ್ಯಾಯಾಂಗ ಬಂಧನದಿ0ದ ತಪ್ಪಿಸಿಕೊಂಡ ಆರೋಪಿಗೆ ಶಿಕ್ಷೆ -Vishwanews24
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…