ಬ್ರಹ್ಮಾವರ: ಜನರಿಂದ ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸುತ್ತಿರುವ ವೃದ್ಧೆಯೊಬ್ಬರು ಭಿಕ್ಷಾಟನೆಯಿಂದ ಬಂದ ಹಣವನ್ನು ಸಂಗ್ರಹಿಸಿ ಒಂದು ಲಕ್ಷ ರೂಪಾಯಿಗಳನ್ನು ಸಾಲಿಗ್ರಾಮದಲ್ಲಿರುವ ಗುರುನರಸಿಂಹ ದೇವಸ್ಥಾನಕ್ಕೆ ನೀಡಿದ್ದಾರೆ.
ಬಿಕ್ಷುಕಿ ಅಶ್ವತಮ್ಮ(80) ಕುಂದಾಪುರ ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಾಂಚೋಗೋಡು ಮೂಲದವರಾಗಿದ್ದು, ಸ್ವಾಮಿ ಅಯ್ಯಪ್ಪನ ಕಟ್ಟಾ ಭಕ್ತರಾಗಿದ್ದಾರೆ ಮತ್ತು ಪ್ರತಿವರ್ಷ ಹಲವಾರು ತಿಂಗಳುಗಳ ಕಾಲ ಸಾಂಪ್ರದಾಯಿಕ ಅಯ್ಯಪ್ಪ ಮಾಲಾ ಧರಿಸುತ್ತಾರೆ. ಅವರು ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡಿ ಸಂಗ್ರಹಿಸುವ ಹಣವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಕೊಡುತ್ತಾರೆ. ತನ್ನ ಸ್ವಂತ ಕುಟುಂಬ ಬಡತನದಲ್ಲಿದ್ದರು ಹಣವನ್ನು ಉಳಿತಾಯ ಮಾಡಿ ದಾನ ಮಾಡುತ್ತಾರೆ.
ಕೊರೊನಾ ಸೋಂಕು ದೂರವಾಗಿ ಜಗತ್ತು ಕಲ್ಯಾಣ ರಾಜ್ಯವಾಗಬೇಕು ಎಂಬ ಪ್ರಾರ್ಥನೆಯೊಂದಿಗೆ ಅವರು ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ ದಾನ ಮಾಡಿದ್ದು, ಈ ಹಣವನ್ನು ದೇವಾಲಯವು ತನ್ನ ಭಕ್ತರಿಗೆ ನೀಡುತ್ತಿರುವ ಊಟಕ್ಕೆ ಬಳಸಬೇಕೆಂದು ಅವರು ವಿನಂತಿಸಿದ್ದಾರೆ.
ಅಶ್ವಥಮ್ಮ ಅವರು ಕಾಂಚೋಗೋಡು ದೇವಸ್ಥಾನಕ್ಕೆ 1.5 ಲಕ್ಷ ರೂ., ಪಂಪ ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ, ಪೋಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1.5 ಲಕ್ಷ ರೂಗಳನ್ನು ಕೂಡ ದೇಣಿಗೆ ನೀಡಿದ್ದಾರೆ.
ಸಾಲಿಗ್ರಾಮ ದೇವಸ್ಥಾನಕ್ಕೆ ದೇಣಿಗೆಯನ್ನು ಹಸ್ತಾಂತರಿಸಿದಾಗ ಸಾಲಿಗ್ರಾಮ ದೇವಾಲಯದ ಅರ್ಚಕ ವೇದಮೂರ್ತಿ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ.ನಾಗರಾಜ ಅವರು ದೇವಾಲಯದ ಪ್ರಸಾದವನ್ನು ಪ್ರಸ್ತುತಪಡಿಸುವ ಮೂಲಕ ಗೌರವಿಸಿದರು.
ಉಡುಪಿ : ನ್ಯಾಯಾಂಗ ಬಂಧನದಿ0ದ ತಪ್ಪಿಸಿಕೊಂಡ ಆರೋಪಿಗೆ ಶಿಕ್ಷೆ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…