ಉಡುಪಿ : ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ.
ಹೆದ್ದಾರಿಯ ರಸ್ತೆ ಮಧ್ಯದಲ್ಲಿ ನವಯುಗ ಕಂಪನಿಗೆ ಸೇರಿದ ವಾಹನಗಳು ಯಾವುದೇ ಸುರಕ್ಷಿತ ನಿಯಮಗಳನ್ನು ಅನುಸರಿಸದೇ ಸ್ವಚ್ಛತೆ ಹಾಗೂ ಇನ್ನಿತರ ಕೆಲಸಗಳನ್ನು ನಡೆಸುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇಂದು ಸುಮಾರು 5:00 ಗಂಟೆ ಸಮಯಕ್ಕೆ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ರಸ್ತೆಯಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸದೆ ನಿಂತಿರುವ ನವಯುಗ ಕಂಪನಿಗೆ ಸೇರಿದ ವಾಹನ ಒಂದಕ್ಕೆ ಡಿಕ್ಕಿ ಹೊಡೆದಿದೆ.
ಟ್ಯಾಂಕರ್ ವಾಹನ ನಂತರ ನಿಧಾನಕ್ಕೆ ಚಲಿಸಿ ರಸ್ತೆ ಎಡಭಾಗಕ್ಕೆ ಹೋಗಿ ನಿಂತಿದೆ. ವಾಹನ ಎರಡು ಅಡಿ ಮುಂದೆ ಚಲಿಸಿದ್ದರೆ ಪಲ್ಟಿಯಾಗಿ ಕರೆಂಟ್ ಕಂಬ ಹಾಗೂ ಮನೆಗಳು ಮೇಲೆ ಬಿದ್ದು ಅನಾಹುತ ಸಂಭವಿಸುತ್ತಿತ್ತು. ಈ ಅಪಘಾತ ನವಯುಗ ಕಂಪನಿಯ ಅಜಾಗರೂಕತೆಯಿಂದ ಉಂಟಾಗಿದ್ದು ಕಂಪನಿ ಆ ಚಾಲಕನಿಗೆ ಸೂಕ್ತ ಪರಿಹಾರವನ್ನು ಒದಗಿಸಿ ಕೊಡಬೇಕು ಹಾಗೂ ಮುಂದಕ್ಕೆ ಇಂತಹ ಘಟನೆಗಳು ನಡೆಯದಂತೆ ಕಂಪೆನಿಯವರು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರಾದ ಅನ್ಸಾರ್ ಅಹಮದ್ ರವರು ಆಗ್ರಹಿಸಿರುತ್ತಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…