Featured

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರದ ಮಟಪಾಡಿ ಗ್ರಾಮದ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರ ಬ್ರಹ್ಮಾವರ ಸರ್ಕಾರಿ ಬೋರ್ಡ್‌ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಬಾಲಕನನ್ನು ಅಪಹರಿಸಿ ಕೇರಳದ ತಲಪಾಡಿ ಸಮೀಪದ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಗೆ ಬಲವಂತವಾಗಿ ಕರೆದೊಯ್ದು ಕೆಲಸಕ್ಕೆ ಸೇರಿಸಿದ್ದರೆಂದು ಆರೋಪಿಸಲಾಗಿದೆ.

ಮನೆಗೆ ಹೋಗುವುದಾಗಿ ಬಾಲಕ ಹೇಳಿದರೂ ಬಿಡದೆ, ಜೂನ್ 9ರಂದು ಆರೋಪಿಗಳಲ್ಲಿ ಒಬ್ಬನು ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮತ್ತೊಬ್ಬ ಆರೋಪಿ ಚೂರಿ ತೋರಿಸಿ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಈ ಘಟನೆಯನ್ನು ಮತ್ತೋರ್ವ ಆರೋಪಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2026ರಡಿ ವಿವಿಧ ಸೆಕ್ಷನ್‌ಗಳ ಅನ್ವಯ ಪುಕರಣ ದಾಖಲಾಗಿದೆ.

ಪುಕರಣದ ಆರೋಪಿಗಳಾದ ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪುಕರಣದ ಮೂರನೇ ಆರೋಪಿ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ
ಹಾಜರುಪಡಿಸಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

2 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

5 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

5 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

5 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

6 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

6 hours ago