ಉಡುಪಿ: ಬ್ರಹ್ಮಾವರ ಅಯ್ಯಪ್ಪ ಮಂದಿರದಲ್ಲಿ ನಡೆದ ಅಚ್ಚರಿಯ ಘಟನೆ -Vishwanews24

ಉಡುಪಿ: ಇಲ್ಲಿನ ಬ್ರಹ್ಮಾವರ ತಾಲೂಕಿನಲ್ಲಿ ಯಕ್ಷಗಾನ ವೇಷಧಾರಿಯೊಬ್ಬರ ಮೇಲೆ ದೈವದ ಆವಾಹನೆಯಾಗಿರುವ ಘಟನೆಯೊಂದು ವರದಿಯಾಗಿದೆ.

ಹಟ್ಟಿಯಂಗಡಿ ಯಕ್ಷಗಾನ ಮೇಳದ ಕಲಾವಿದರೊಬ್ಬರು ಧೂಮಾವತಿ ದೈವದ ವೇಷ ಧರಿಸಿದ್ದ ಸಂದರ್ಭದಲ್ಲಿ ದೈವದ ಆವಾಹನೆಯಾಗಿದೆ. ಯಕ್ಷಗಾನ ಪಾತ್ರಧಾರಿ ರಾಜೇಶ್ ಆಚಾರ್ಯ ದೈವದ ವೇಷ ಧರಿಸಿದ್ದರು. ರಂಗಸ್ಥಳ ಪ್ರವೇಶಕ್ಕೂ ಮುನ್ನ ಅವರನ್ನು ಪ್ರೇಕ್ಷಕರ ನಡುವೆಯಿಂದ ಕರೆತರಲಾಗಿತ್ತು. ಈ ಸಂದರ್ಭ ಅವರ ಮೈಮೇಲೆ ದೈವದ ಆವೇಶ ಬಂದಿದೆ.

ದೈವದ ಆವಾಹನೆಯಾದ ಸಂದರ್ಭ ಪಂಜು ಹಿಡಿದು ವಿಚಿತ್ರವಾಗಿ ವರ್ತಿಸಿದ ಕಲಾವಿದ ನೆಲಕ್ಕೆ ಕುಸಿದು ಬಿದ್ದಿದ್ದಾರೆ ಎಂದು ಪ್ರೇಕ್ಷಕರು ತಿಳಿಸಿದ್ದಾರೆ.

ಬ್ರಹ್ಮಾವರ ಅಯ್ಯಪ್ಪ ಮಂದಿರದಲ್ಲಿ ದೈವ ದೃಷ್ಟಿ ಎಂಬ ಯಕ್ಷಗಾನ ಪ್ರಸಂಗವನ್ನು ತಂಡ ಆಡಿಸಿದ ವೇಳೆ ಘಟನೆ ನಡೆದಿದೆ. ಅಯ್ಯಪ್ಪ ಸೇವಾ ಸಮಿತಿಯ ಗುರು ಸ್ವಾಮಿ ಕೂಡಲೇ ಆಗಮಿಸಿ ಪ್ರಸಾದ ಹಾಕಿದ ನಂತರ ಪಾತ್ರಧಾರಿ ಶಾಂತವಾಗಿದ್ದಾರೆ. ಬಳಿಕ ಯಕ್ಷಗಾನ ಪ್ರಸಂಗ ಯಾವುದೇ ರೀತಿಯ ವಿಘ್ನ ಇಲ್ಲದೇ ಮುಂದುವರಿದಿದೆ ಎನ್ನಲಾಗಿದೆ.

ಕಲಾವಿದ ರಾಜೇಶ್ ಆಚಾರ್ಯ ಮಾತನಾಡಿ, ಆ ಕ್ಷಣದಲ್ಲಿ ಏನಾಗುತ್ತಿದೆ ಎಂಬುದು ಗೊತ್ತಾಗಿಲ್ಲ. ಕೆಲವು ಕ್ಷಣಗಳ ನಂತರ ಸಹಜ ಸ್ಥಿತಿಗೆ ಬಂದಿದ್ದೇನೆ ಎಂದು ಹೇಳಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago