ಉಡುಪಿ

ಬ್ರಹ್ಮಾವರ : ಕೊರೊನಾ ಲಸಿಕೆ ನೋಂದಣಿಗೆ ಸರಳ ರೀತಿಯ ಆಪ್‍ ; ಕರಾವಳಿಯ ಯುವಕರಿಂದ ವಿನೂತನ ಆವಿಷ್ಕಾರ -Vishwanews24

ಬ್ರಹ್ಮಾವರ : ಕೊರೊನಾ ಲಸಿಕೆ ನೋಂದಣಿಗೆ ಸರಳ ರೀತಿಯ ಆಪ್‍ ; ಕರಾವಳಿಯ ಯುವಕರಿಂದ ವಿನೂತನ ಆವಿಷ್ಕಾರ -Vishwanews24

ಬ್ರಹ್ಮಾವರ : ಕೊರೊನಾ ಲಸಿಕೆಗಾಗಿ ದಿನನಿತ್ಯ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಅಲೆದಾಡುವ ಮತ್ತು ಲಸಿಕೆ ಪಡೆಯುವ ವ್ಯವಸ್ಥೆಯಲ್ಲಿರುವ ಹಲವಾರು ಸಮಸ್ಯೆ ಗೊಂದಲಗಳಿಗೆ ಪರಿಹಾರವೆಂಬಂತೆ ಸಾಲಿಗ್ರಾಮ ಕಾರ್ಕಡದ ಇಬ್ಬರು ಸಂಬಂಧಿಗಳು ಲಸಿಕೆ ನೋಂದಣಿಗೆ ಸರಳ ರೀತಿಯ ಆಪ್‍ವೊಂದನ್ನು ಆವಿಷ್ಕರಿಸಿದ್ದು, ಹಲವಾರು ಜನರು ಈಗಾಗಲೇ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಕೋವಿನ್, ಆರೋಗ್ಯ ಸೇತು ಆಪ್‍ಗಳ ಮೂಲಕ ಈಗಾಗಲೇ ಲಸಿಕೆ ಪಡೆಯಲು ನೋಂದಣಿಗೆ ಅವಕಾಶವಿದ್ದು, ನೋಂದಣಿ ಆದ ಮೇಲೆ ಲಸಿಕೆ ಲಭ್ಯತೆಯ ಬಗ್ಗೆ ಮೆಸೇಜ್ ಹಾಗೂ ನೋಟಿಫೀಕೇಶನ್, ಆಲರಾಂ ಮೂಲಕ ನಮಗೆ ಸಂದೇಶ ಎಚ್ಚರಿಸುವ ವ್ಯವಸ್ಥೆ ಈ ಆಪ್‍ನಿಂದ ಆಗುತ್ತಿದೆ. ನಮ್ಮ ಕೆಲಸದ ಒತ್ತಡದ ಸಂದರ್ಭದಲ್ಲಿ ಈ ಸಂದೇಶಗಳನ್ನು ನೋಡುವುದೇ ಕಷ್ಟವಾಗಿರುತ್ತದೆ. ಆದರೆ ಇದೆಲ್ಲ ಸಮಸ್ಯೆಗೆ ಪರಿಹಾರವೆಂಬಂತೆ ಲಸಿಕೆ ಲಭ್ಯತೆಯ ಸಮಯದಲ್ಲಿ ಅಲರಾಮ್ ಮೂಲಕ ನಮ್ಮನ್ನು ಎಚ್ಚರಿಸುವ ನೂತನ ಆಪ್ ವ್ಯಾಕ್‍ಟ್ರ್ಯಾಕ್‍ ಅನ್ನು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಸಾಲಿಗ್ರಾಮ ಕಾರ್ಕಡದ ಸಾಪ್ಟ್‌ವೇರ್ ಇಂಜಿನಿಯರ್‌‌ಗಳಾದ ರಾಮದಾಸ್ ನಾಯಕ್ ಮತ್ತು ಕಾರ್ತಿಕ್ ಕಾಮತ್ ಕೊಂಚಾಡಿ ಇವರುಗಳು ಕಂಡು ಹಿಡಿದು ಲಸಿಕೆ ಪಡೆಯಲು ಸರಳ ವ್ಯವಸ್ಥೆಯನ್ನು ಜನರಿಗೆ ಪರಿಚಯಿಸಿದ್ದಾರೆ.

ಹೇಗೆ ಕೆಲಸ ಮಾಡುತ್ತೆ?

ಗೂಗಲ್ ಪ್ಲೇ ಸ್ಟೋರ್‌‌ನಲ್ಲಿ ವ್ಯಾಕ್‍ಟ್ರ್ಯಾಕ್ ಆಪ್‍ ಅನ್ನು ಡೌನ್‍ಲೋಡ್ ಮಾಡಿಕೊಂಡು ವ್ಯಕ್ತಿ ಇರುವ ಸ್ಥಳದ ಪಿನ್‍ಕೋಡ್‍ ಅನ್ನು ನಮೂದಿಸಿ ಸಬ್‍ಮಿಟ್ ನೀಡಿದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಲಸಿಕೆಯ ಬಗ್ಗೆ ಮಾಹಿತಿ ನೀಡುತ್ತದೆ. ನಂತರ ನೋಂದಣಿಗಾಗಿ ನೇರವಾಗಿ ಕೋವಿನ್ ಆಪ್‍ಗೆ ಲಿಂಕ್ ಒದಗಿಸುತ್ತದೆ. ನೋಂದಣಿಯ ನಂತರ ಲಸಿಕೆ ಲಭ್ಯತೆಯ ಆಗುವ ದಿನದಂದು ಸಂದೇಶಗಳನ್ನು ಅಲರಾಂ ಹೊಡೆಯುವ ಮೂಲಕ ವ್ಯಕ್ತಿಯನ್ನು ಎಚ್ಚರಿಸುವ ಕಾರ್ಯ ಮಾಡುತ್ತದೆ. ಯಾವ ಭಾಗದ ಪಿನ್‍ಕೋಡ್‍ಗಳನ್ನು ಈ ಆಪ್‍ನಲ್ಲಿ ನಾವು ನಮೂದಿಸುತ್ತೇವೆ. ಆ ಪಿನ್‍ಕೋಡ್‍ನ ಸುತ್ತಮುತ್ತ ಇರುವ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯ ಪ್ರಮಾಣದ ಬಗ್ಗೆ ಮಾಹಿತಿ ನೀಡುತ್ತದೆ.

ಇದೇ ಆಪ್ ಮೂಲಕ ವ್ಯಕ್ತಿಗೆ ಬೇಕಾಗುವ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆ ಮತ್ತು ಆಸ್ಪತ್ರೆಯನ್ನು ಆಯ್ಕೆ ಮಾಡಿ ಕೋವಿನ್ ಆಪ್ ಮೂಲಕ ನೇರವಾಗಿ ನೋಂದಣಿ ಮಾಡುವ ವ್ಯವಸ್ಥೆ ಬಗ್ಗೆ ಆವಿಷ್ಕಾರ ಮಾಡುತ್ತಿದ್ದಾರೆ ರಾಮದಾಸ್ ನಾಯಕ್..

“ಜನಸಾಮಾನ್ಯರಿಗೆ ಇಂದಿನ ಸ್ಥಿತಿಗೆ ಅನುಗುಣವಾಗಿ ಆಧುನಿಕ ತಂತ್ರಜ್ಞಾನದ ಮೂಲಕ ಸುಲಭ ರೀತಿಯ ಆವಿಷ್ಕಾರಕ್ಕೆ ಕೈಹಾಕಿದ್ದೇವೆ. ಯಶಸ್ವಿ ಆಗಿದ್ದೇವೆ ಎಂಬ ಆಶಯ ಕೂಡಾ ನಮ್ಮಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆವಿಷ್ಕಾರಗಳನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುವುದು” ಎಂದು ಹೇಳುತ್ತಾರೆ ರಾಮದಾಸ್ ನಾಯಕ್.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

12 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

22 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

40 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

44 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

52 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago