Featured

ಬ್ರಹ್ಮಾವರ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು – Vishwanews24

ಬ್ರಹ್ಮಾವರ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು

ಬ್ರಹ್ಮಾವರ: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ.

ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ವಾನ್ ಎ.ಕೆ.(27) ಎಂದು ಗುರುತಿಸಲಾಗಿದೆ.

ಸ್ಕೂಟರ್ ಸವಾರ ಭುಜಂಗ ಶೆಟ್ಟಿ(68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗ್ಗೆ 9:45ರ ಸುಮಾರಿಗೆ ಹಾಲಾಡಿ ಮಾರ್ಗವಾಗಿ ಸಾಯಿಬರಕಟ್ಟೆ ಕಡೆಯಿಂದ ಬ್ರಹ್ಮಾವರದ ಕಡೆಗೆ ಹೋಗುತ್ತಿದ್ದ ಬೈಕಿಗೆ ಬ್ರಹ್ಮಾವರ ಕಡೆಯಿಂದ ಸಾಯಿಬರ ಕಟ್ಟೆ ಕಡೆಗೆ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಮತ್ತು ಸ್ಕೂಟರ್ ಸವಾರಿಬ್ಬರೂ ವಾಹನಗಳ ಸಮೇತ ರಸ್ತೆಯ ಮೇಲೆ ಬಿದ್ದ ಗಾಯಗೊಂಡರು. ಇವರಿಬ್ಬರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಸಫ್ವಾನ್ ತಡರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago