ಬ್ರಹ್ಮಾವರ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್ ಹನುಮಂತ ಕಟ್ಟಿಮನಿ (39) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ 32000ರೂ. ನಗದು ಹಾಗೂ ಮೊಬೈಲ್ನ್ನು ವಶಪಡಿಸಕೊಳ್ಳಲಾಗಿದೆ.
ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಗ್ಮಿ ಕಲೆಕ್ಷನ್ ಮಾಡಿದ ನಗದನ್ನು ಬೈಕ್ ನ ಸೈಡ್ ಬಾಕ್ಸ್ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್ಗೆ ಹೋಗಿ ಪಿಗ್ಮಿ ಕಲೆಕ್ಷನ್ ಮಾಡಿದ್ದರು.
ಬಳಿಕ ವಾಪಾಸು ಬಂದು ನೋಡಿದಾಗ ಬೈಕ್ ನ ಬಾಕ್ಸ್ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ ನ ಬೀಗ ಒಡೆದು ಬಾಕ್ಸ್ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್ ಕಾರ್ಡ್, ಆಧಾರ್ ಕಾರ್ಡ್ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…