ಬ್ರಹ್ಮಾವರ: ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಎ.7ರಂದು ನಡೆದಿದೆ.
ಬ್ರಹ್ಮಾವರ ನಿವಾಸಿ 62ವರ್ಷದ ಆಶಾಲತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಇವರು ದತ್ತು ಪುತ್ರಿ ಶಮೀಕ್ಷಾ ಎಂಬವರೊಂದಿಗೆ ವಾಸವಾಗಿದ್ದು, ಅವರ ಪತಿ ಮೃತಪಟ್ಟಿದ್ದರು. ತಾಯಿ ಆಶಾಲತಾ ಹಾಗೂ ಮಗಳು ಶಮೀಕ್ಷಾಳಿಗೆ ಸಣ್ಣ ಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆಯಾಗಿತ್ತು.
ಇದೇ ವಿಚಾರದಲ್ಲಿ ಮನನೊಂದ ಆಶಾಲತಾ ಅವರು ನಿನ್ನೆ ಮಗಳಿಗೆ ‘ತಾನು ಸಾಯುತ್ತೇನೆ ಎಂದು’ ವಾಟ್ಸಪ್ ಸಂದೇಶ ಕಳುಹಿಸಿ, ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಮೃತ ಆಶಾಲತಾ ಅವರ ತಂಗಿ ಜ್ಯೋತಿಪ್ರಭಾ ಅವರು ಮರಣದಲ್ಲಿ ಸಂಶಯವಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…