ಬ್ರಹ್ಮಾವರ: ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಎ.7ರಂದು ನಡೆದಿದೆ.
ಬ್ರಹ್ಮಾವರ ನಿವಾಸಿ 62ವರ್ಷದ ಆಶಾಲತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಇವರು ದತ್ತು ಪುತ್ರಿ ಶಮೀಕ್ಷಾ ಎಂಬವರೊಂದಿಗೆ ವಾಸವಾಗಿದ್ದು, ಅವರ ಪತಿ ಮೃತಪಟ್ಟಿದ್ದರು. ತಾಯಿ ಆಶಾಲತಾ ಹಾಗೂ ಮಗಳು ಶಮೀಕ್ಷಾಳಿಗೆ ಸಣ್ಣ ಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆಯಾಗಿತ್ತು.
ಇದೇ ವಿಚಾರದಲ್ಲಿ ಮನನೊಂದ ಆಶಾಲತಾ ಅವರು ನಿನ್ನೆ ಮಗಳಿಗೆ ‘ತಾನು ಸಾಯುತ್ತೇನೆ ಎಂದು’ ವಾಟ್ಸಪ್ ಸಂದೇಶ ಕಳುಹಿಸಿ, ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಮೃತ ಆಶಾಲತಾ ಅವರ ತಂಗಿ ಜ್ಯೋತಿಪ್ರಭಾ ಅವರು ಮರಣದಲ್ಲಿ ಸಂಶಯವಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…