ಬ್ರಹ್ಮಾವರ ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್, ಇಬಾದ್ ಹಾಗೂ ಅವರ ಸಂಬಂಧಿಕರಾದ ತೀರ್ಥಹಳ್ಳಿಯ ಈರ್ವರು ಮೃತಪಟ್ಟವರು ಎನ್ನಲಾಗಿದೆ.
ಈದ್ ಹಿನ್ನೆಲೆಯಲ್ಲಿ ಶೃಂಗೇರಿಯ ಯುವಕರು ಹೂಡೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇಂದು ಸಂಜೆ ಒಟ್ಟು ಏಳು ಮಂದಿ ನದಿಯಿಂದ ಮರುವಾಯಿ ಸಂಗ್ರಹಿಸುವ ಉದ್ದೇಶದಿಂದ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ದೋಣಿಯಲ್ಲಿ ತೆರಳಿದ್ದರು. ಈ ಸಂದರ್ಭ ನಾಲ್ವರು ನೀರಿನಲ್ಲಿ ಮುಳುಗಿ ಪತ್ತೆಯಾಗಿದರೆನ್ನಲಾಗಿದೆ.
ರವಿವಾರ ಜೋರಾದ ಗಾಳಿ ಬೀಸುತ್ತಿದ್ದುದರಿಂದ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ. ಯುವಕರ ಗುಂಪಿನ ಕಿರುಚಾಟ ಕೇಳಿ ಸ್ಥಳೀಯರಿಗೆ ವಿಚಾರ ತಿಳಿದಿದೆ. ಮೂವರು ಈಜಿಕೊಂಡು ದಡ ಸೇರಿದ್ದಾರೆ. ಬ್ರಹ್ಮಾವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…