ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಸಂಭವಿಸಿದೆ.
ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21) ಸಾವನ್ನಪ್ಪಿದ ದುರ್ದೈವಿಗಳು.
ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಶಾಂತ್ ಹಾಗೂ ಶ್ರೀಶಾ ಮನೆ ಸಮೀಪದ ಕೂಗಳತೆ ದೂರದ ಸೀತಾ ನದಿಗೆ ಮೀನು ಹಿಡಿಯಲು ತೆರಳಿದ್ದರು. ಮೀನಿಗಾಗಿ ಬಲೆ ಹಾಕುತ್ತಿರುವ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಸಮೀಪದಲ್ಲೇ ಬಟ್ಟೆ ತೊಳೆಯುತ್ತಿದ್ದ ಮಹಿಳೆ ಗಮನಿಸಿ ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಈರ್ವರು ಸಾವನ್ನಪ್ಪಿದ್ದಾರೆ.
ಬ್ರಹ್ಮಾವರ ಠಾಣಾಧಿಕಾರಿ ಮಧು ಪಿ.ಎಸ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…