Featured

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯದೇ ಟೋಲ್ ಸಂಗ್ರಹ ಮಾಡಬಾರದು – ಶಾಸಕ ರಘುಪತಿ ಭಟ್ -Vishwanews24

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯದೇ ಟೋಲ್ ಸಂಗ್ರಹ ಮಾಡಬಾರದು – ಶಾಸಕ ರಘುಪತಿ ಭಟ್ -Vishwanews24

ಬ್ರಹ್ಮಾವರ, ,: “ರಾಷ್ಟ್ರೀಯ ಹೆದ್ದಾರಿ ಈಗಿನ ಸಮಸ್ಯೆಗೆ ಕಂಟ್ರಾಕ್ಟರ್ ಕಾರಣ, ಕಾಮಗಾರಿ ಮುಗಿಯದೇ ಟೋಲ್ ಸಂಗ್ರಹ ಮಾಡಬಾರದು ಎಂದು ನಾವು ಗಲಾಟೆ ಮಾಡಿದ್ದೆವು. ಆದರೆ, ಪೋಲಿಸ್ ಫೋರ್ಸ್ ಮತ್ತು ರಾಜಕೀಯ ನಾಯಕರ ಪ್ರಭಾವ ಬಳಸಿ ಟೋಲ್ ಹಾಕಿಸಿದ್ದಾರೆ” ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು.

ಬ್ರಹ್ಮಾವರದಲ್ಲಿ ರಸ್ತೆ ಅಪಘಾತ ತಡೆಯ ಬಗ್ಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರೋಡ್ ಕಂಪ್ಲಿಟ್ ಆಗದೇ ಎಲ್ಲರಿಂದಲೂ ಟೋಲ್ ಸಂಗ್ರಹ ಮಾಡುತಿದ್ದಾರೆ. ಸರಕಾರಿ ಅಧಿಕಾರಿಗಳನ್ನು ಕೂಡಾ ಇವರು ಬಿಡುವುದಿಲ್ಲ. ಸಂಸ್ಥೆಯವರ ವರ್ತನೆ ಅತಿರೇಕಕ್ಕೆ ಹೋಗಿದೆ. ಕರಾವಳಿ ಜಂಕ್ಷನ್ ನಲ್ಲಿ ಅಂಡರ್ ಪಾಸ್ ಆಗಿ ಎರಡು ವರ್ಷ ಅಗಿದೆ ಅದರೆ ಇದುವರೆಗೆ ಅಲ್ಲಿ ಲೈಟ್ ಅನ್ ಮಾಡಿಸಿಲ್ಲ. ಇದು ಇನ್ನು ಜನ ಪ್ರತಿರೋಧ ಒಡ್ಡಿ ಮುಂದೊಂದು ದಿನ ಟೋಲ್ ಬಂದ್ ಮಾಡಿಸುವ ದಿನ ಬಂದರೂ ಬರಬಹುದು. ತಕ್ಷಣ ಕೆಲಸ ಪೂರ್ಣ ಮಾಡದೇ ಇದ್ದಲ್ಲಿ ಟೊಲ್ ಅನ್ನು ಅನಿವಾರ್ಯವಾಗಿ ಬಂದ್ ಮಾಡಬೇಕಾದಿತು”‌ ಎಂದು ತಿಳಿಸಿದರು.

“ಈ ಮೊದಲು ನಡೆದ ಸಂಸದರ ಸಭೆ, ಜಿಲ್ಲಾ ಪಂಚಾಯತ್ ಸಭೆಗಳಲ್ಲಿ ಕೂಡಾ ಈ ಕುರಿತಾಗಿ ನಾವು ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದೆವೆ ಆದರೆ ಜನಪ್ರತಿನಿಧಿಗಳ ಮಾತಿಗೆ ಕೂಡಾ ಬೆಲೆ ಇಲ್ಲದಾಗಿದೆ. ಮಾತಾಡಿದರೆ ಅವರು ನಮಗೆ ಮಾಡಿದ ಒಪ್ಪಂದದ ಪ್ರಕಾರ ನಾವು ನಡೆದುಕೊಂಡಿದ್ದೇವೆ ಎಂದು ಅಗ್ರಿಮೆಂಟ್ ಅನ್ನು ತೋರಿಸುತ್ತಾರೆ. ಯಾವುದೇ ಸಭೆಗೂ ಉನ್ನತ ಮಟ್ಟದ ಅಧಿಕಾರಿಗಳು ಬಾರದೇ ಇತರರನ್ನು ಕಳುಹಿಸುತ್ತಾರೆ, ಸಭೆಗೆ ಬಂದವರಿಗೆ ಇಂಗ್ಲಿಷ್ ಬಿಟ್ಟು ಬೇರೆ ಭಾಷೆಯಲ್ಲಿ ಹೇಳಿದರೆ ಅವರಿಗೆ ಅರ್ಥವಾಗುವುದಿಲ್ಲ” ಎಂದು ಹೇಳಿದರು.

ಜನರು ಶಾಸಕ, ಸಂಸದರು ಎನೂ ಮಾತಾಡಲ್ಲ ಎಂದೆಣಿಸುತ್ತಾರೆ. ನಾವು ಮಾತನಾಡಿ, ಗಲಾಟೆ ಕೂಡಾ ಮಾಡಿದ್ದೆವೆ. ಆದರೆ, ಇದುವರೆಗೆ ಕಾಮಗಾರಿ ಸಂಪೂರ್ಣವಾಗಿಲ್ಲ. ಜಿಲ್ಲಾಡಳಿತ ಟೋಲ್ ಗೇಟ್‌ಗೆ ನೀಡಿದ ಭದ್ರತೆಯನ್ನು ಹಿಂಪಡೆದರೆ ಇಂದಿಗೂ ಜನರು ಟೋಲ್ ನೀಡದೆ ಸಂಚರಿಸಲು ತಯಾರಿದ್ದಾರೆ” ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago