Featured

ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು – vishwanews24

ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು

ಬ್ರಹ್ಮಾವರ : ಹಿರಿಯಡ್ಕ ಸಮೀಪದ ಹಾಲಾಡಿ ಗ್ರಾಮದ ಹನೇಹಳ್ಳಿಯ ಖಾಸಗಿ ರೆಸಾರ್ಟ್‌ವೊಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಮತ್ತು ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆಗಳ ಗುಂಪನ್ನು ಪೊಲೀಸರು ಪತ್ತೆಹಚ್ಚಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ವಿವರ:
ಗರ್ಭಿಣಿಯೆಂದು ಹೇಳಿಕೊಂಡ ವಿದೇಶಿ ಮಹಿಳೆಯೊಬ್ಬರು ವೈದ್ಯಕೀಯ ಚಿಕಿತ್ಸೆಗಾಗಿ ಬಾರ್ಕೂರಿನ ಸರ್ಕಾರಿ ಆಸ್ಪತ್ರೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಆಕೆಯ ಬಳಿ ಯಾವುದೇ ಅಧಿಕೃತ ಗುರುತಿನ ಚೀಟಿ ಅಥವಾ ಪ್ರಯಾಣದ ದಾಖಲೆಗಳು ಇಲ್ಲದಿರುವುದು ಕಂಡುಬಂದಿದೆ. ಆಸ್ಪತ್ರೆಯ ಅಧಿಕಾರಿಗಳು ತಕ್ಷಣವೇ ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹನೇಹಳ್ಳಿ ಗ್ರಾಮದ ‘ಕುರಾಡಿ ಸಂಕಮ್ಮ ತಾಯಿ ರೆಸಾರ್ಟ್’ನಲ್ಲಿ ಆರು ಮಂದಿ ವಯಸ್ಕರು ಮತ್ತು ಮೂವರು ಅಪ್ರಾಪ್ತ ಮಕ್ಕಳು ಅಕ್ರಮವಾಗಿ ತಂಗಿರುವುದು ಪತ್ತೆಯಾಗಿದೆ.

ರೀಪಕ್ ದಮಾಯಿ (28), ಸುನೀತಾ ದಮಾಯಿ (27), ಊರ್ಮಿಳಾ (19), ಕೈಲಾಶ್ ದಮಾಯಿ (೧೮), ಕಪಿಲ್ ದಮಾಯಿ (19), ಸುನೀತಾ ದಮಾಯಿ (21) ಎಂಬುವವರು ಪತ್ತೆಯಾಗಿದ್ದಾರೆ.

ಪೊಲೀಸರ ವಿಚಾರಣೆಯ ವೇಳೆ ಇವರ ಬಳಿ ಭಾರತೀಯ ಪೌರತ್ವ ಅಥವಾ ಪಾಸ್‌ಪೋರ್ಟ್, ವೀಸಾ, ಜನ್ಮ ಪ್ರಮಾಣಪತ್ರದಂತಹ ಯಾವುದೇ ಅಧಿಕೃತ ದಾಖಲೆಗಳು ಇರಲಿಲ್ಲ. ತಾವು ಯಾವ ದೇಶದವರು ಎಂಬ ಬಗ್ಗೆಯೂ ಅವರು ಸ್ಪಷ್ಟ ಮಾಹಿತಿ ನೀಡಿಲ್ಲ, ಹೀಗಾಗಿ ಇವರು ಅಕ್ರಮವಾಗಿ ಭಾರತಕ್ಕೆ ನುಸುಳಿರುವ ಶಂಕೆ ವ್ಯಕ್ತವಾಗಿದೆ.

ರೆಸಾರ್ಟ್ ಮಾಲೀಕರ ಮೇಲೆ ಕ್ರಮ:

ಈ ರೆಸಾರ್ಟ್ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾಗಿರುವ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.

“ಎಲ್ಲಾ ರೆಸಾರ್ಟ್ ಮತ್ತು ಲಾಡ್ಜ್ ಮಾಲೀಕರು ವಿದೇಶಿ ಪ್ರಜೆಗಳು ತಂಗುವ ಸಂದರ್ಭದಲ್ಲಿ ಅವರ ಬಳಿಯಿಂದ ಕಡ್ಡಾಯವಾಗಿ ‘ಸಿ ಫಾರ್ಮ್’ ಪಡೆದುಕೊಳ್ಳಬೇಕು ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಮಾಹಿತಿ ನೀಡಬೇಕು. ಸರಿಯಾದ ದಾಖಲೆಗಳಿಲ್ಲದ ವಿದೇಶಿಯರು ಬಂದರೆ ತಕ್ಷಣ ಪೊಲೀಸರಿಗೆ ತಿಳಿಸುವುದು ಅವರ ಜವಾಬ್ದಾರಿಯಾಗಿದೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ತಿಳಿಸಿದ್ದಾರೆ.

ಅಕ್ರಮ ವಿದೇಶಿಯರ ವಾಸ್ತವ್ಯ ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದು, ದಾಖಲೆಗಳಿಲ್ಲದವರಿಗೆ ಕೆಲಸ ನೀಡುವುದು ಅಪರಾಧವಾಗಿದೆ. ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವ ಮಾಲೀಕರು ಮತ್ತು ವ್ಯವಸ್ಥಾಪಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

1 hour ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 hour ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago