Featured

ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು – vishwanews24

ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು

ಬ್ರಹ್ಮಾವರ : ಹಿರಿಯಡ್ಕ ಸಮೀಪದ ಹಾಲಾಡಿ ಗ್ರಾಮದ ಹನೇಹಳ್ಳಿಯ ಖಾಸಗಿ ರೆಸಾರ್ಟ್‌ವೊಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಮತ್ತು ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆಗಳ ಗುಂಪನ್ನು ಪೊಲೀಸರು ಪತ್ತೆಹಚ್ಚಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ವಿವರ:
ಗರ್ಭಿಣಿಯೆಂದು ಹೇಳಿಕೊಂಡ ವಿದೇಶಿ ಮಹಿಳೆಯೊಬ್ಬರು ವೈದ್ಯಕೀಯ ಚಿಕಿತ್ಸೆಗಾಗಿ ಬಾರ್ಕೂರಿನ ಸರ್ಕಾರಿ ಆಸ್ಪತ್ರೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಆಕೆಯ ಬಳಿ ಯಾವುದೇ ಅಧಿಕೃತ ಗುರುತಿನ ಚೀಟಿ ಅಥವಾ ಪ್ರಯಾಣದ ದಾಖಲೆಗಳು ಇಲ್ಲದಿರುವುದು ಕಂಡುಬಂದಿದೆ. ಆಸ್ಪತ್ರೆಯ ಅಧಿಕಾರಿಗಳು ತಕ್ಷಣವೇ ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹನೇಹಳ್ಳಿ ಗ್ರಾಮದ ‘ಕುರಾಡಿ ಸಂಕಮ್ಮ ತಾಯಿ ರೆಸಾರ್ಟ್’ನಲ್ಲಿ ಆರು ಮಂದಿ ವಯಸ್ಕರು ಮತ್ತು ಮೂವರು ಅಪ್ರಾಪ್ತ ಮಕ್ಕಳು ಅಕ್ರಮವಾಗಿ ತಂಗಿರುವುದು ಪತ್ತೆಯಾಗಿದೆ.

ರೀಪಕ್ ದಮಾಯಿ (28), ಸುನೀತಾ ದಮಾಯಿ (27), ಊರ್ಮಿಳಾ (19), ಕೈಲಾಶ್ ದಮಾಯಿ (೧೮), ಕಪಿಲ್ ದಮಾಯಿ (19), ಸುನೀತಾ ದಮಾಯಿ (21) ಎಂಬುವವರು ಪತ್ತೆಯಾಗಿದ್ದಾರೆ.

ಪೊಲೀಸರ ವಿಚಾರಣೆಯ ವೇಳೆ ಇವರ ಬಳಿ ಭಾರತೀಯ ಪೌರತ್ವ ಅಥವಾ ಪಾಸ್‌ಪೋರ್ಟ್, ವೀಸಾ, ಜನ್ಮ ಪ್ರಮಾಣಪತ್ರದಂತಹ ಯಾವುದೇ ಅಧಿಕೃತ ದಾಖಲೆಗಳು ಇರಲಿಲ್ಲ. ತಾವು ಯಾವ ದೇಶದವರು ಎಂಬ ಬಗ್ಗೆಯೂ ಅವರು ಸ್ಪಷ್ಟ ಮಾಹಿತಿ ನೀಡಿಲ್ಲ, ಹೀಗಾಗಿ ಇವರು ಅಕ್ರಮವಾಗಿ ಭಾರತಕ್ಕೆ ನುಸುಳಿರುವ ಶಂಕೆ ವ್ಯಕ್ತವಾಗಿದೆ.

ರೆಸಾರ್ಟ್ ಮಾಲೀಕರ ಮೇಲೆ ಕ್ರಮ:

ಈ ರೆಸಾರ್ಟ್ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾಗಿರುವ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.

“ಎಲ್ಲಾ ರೆಸಾರ್ಟ್ ಮತ್ತು ಲಾಡ್ಜ್ ಮಾಲೀಕರು ವಿದೇಶಿ ಪ್ರಜೆಗಳು ತಂಗುವ ಸಂದರ್ಭದಲ್ಲಿ ಅವರ ಬಳಿಯಿಂದ ಕಡ್ಡಾಯವಾಗಿ ‘ಸಿ ಫಾರ್ಮ್’ ಪಡೆದುಕೊಳ್ಳಬೇಕು ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಮಾಹಿತಿ ನೀಡಬೇಕು. ಸರಿಯಾದ ದಾಖಲೆಗಳಿಲ್ಲದ ವಿದೇಶಿಯರು ಬಂದರೆ ತಕ್ಷಣ ಪೊಲೀಸರಿಗೆ ತಿಳಿಸುವುದು ಅವರ ಜವಾಬ್ದಾರಿಯಾಗಿದೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ತಿಳಿಸಿದ್ದಾರೆ.

ಅಕ್ರಮ ವಿದೇಶಿಯರ ವಾಸ್ತವ್ಯ ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದು, ದಾಖಲೆಗಳಿಲ್ಲದವರಿಗೆ ಕೆಲಸ ನೀಡುವುದು ಅಪರಾಧವಾಗಿದೆ. ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವ ಮಾಲೀಕರು ಮತ್ತು ವ್ಯವಸ್ಥಾಪಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago