ಬ್ರಹ್ಮಾವರ: ಬ್ರಹ್ಮಾವರ ಸಮೀಪ ಕುಮ್ರಗೋಡು ಸಮೀಪ ಅಪಾರ್ಟ್ಮೆಂಟ್ ನಲ್ಲಿ ನಿಗೂಢ ರೀತಿಯಲ್ಲಿ ಕೊಲೆಯಾದ ವಿಶಾಲಾ ಗಾಣಿಗ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಕೋರಿ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ ರಿ. ಮೂಡುಕೇರಿ, ಬಾರ್ಕೂರು ಇದರ ಆಡಳಿತ ಮಂಡಳಿಯ ನಿಯೋಗ ಇಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಪ್ರಕರಣದ ಕುರಿತು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿದ್ದು, ಆರೋಪಿಗಳನ್ನು ಬಂಧಿಸುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದು ನ್ಯಾಯ ಒದಗಿಸಬೇಕು ಎಂದು ಸಂಘಟನೆಯ ಪರವಾಗಿ ವಿನಂತಿಸಲಾಯಿತು.
ತನಿಖೆಗಾಗಿ ಈಗಾಗಲೇ 4 ವಿಶೇಷ ತಂಡವನ್ನು ರಚಿಸಿದ್ದು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಎಸ್.ಪಿ. ಯವರು ತಿಳಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ವಾಸುದೇವ ಬೈಕಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಅಚ್ಲಾಡಿ, ಮಾಜಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ, ಉಪಾಧ್ಯಕ್ಷ ಸೂರ್ಯನಾರಾಯಣ ಗಾಣಿಗ, ಉದಯ ಕೆ., ಜಂಟಿ ಕಾರ್ಯದರ್ಶಿ ರಾಮಕೃಷ್ಣ ಹಾರಾಡಿ, ಸೌಜನ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…