Featured

ಬ್ರಹ್ಮಾವರ: ವೃದ್ಧ ದಂಪತಿಗೆ 84 ಲಕ್ಷ ರೂ.ವಂಚನೆ ; ಇಬ್ಬರ ವಿರುದ್ಧ ಪ್ರಕರಣ ದಾಖಲು – vishwanews24

ಬ್ರಹ್ಮಾವರ: ವೃದ್ಧ ದಂಪತಿಗೆ 84 ಲಕ್ಷ ರೂ.ವಂಚನೆ- ಇಬ್ಬರ ವಿರುದ್ಧ ಪ್ರಕರಣ ದಾಖಲು

ಬ್ರಹ್ಮಾವರ : ಸ್ನೇಹಿತರಂತೆ ನಟಿಸಿದ ಜೋಡಿಯೊಂದು ವೃದ್ಧ ದಂಪತಿಗೆ ನಯವಾದ ಮಾತು ಮತ್ತು ವರ್ತನೆಯಿಂದ 84 ಲಕ್ಷ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾರಕೂರಿನ ಹನೇಹಳ್ಳಿಯಲ್ಲಿ ದೀನನಾಥ (73) ಮತ್ತು ಅವರ ಪತ್ನಿ ಕಲ್ಯಾಣಿ ವಂಚನೆಗೊಳಗಾದವರು.

ಕೃಷ್ಣ ಯಾನೆ ಕಿಶೋರ ಹಾಗೂ ಆತನ ಸ್ನೇಹಿತೆ ಶಶಿಕಲಾ ವೃದ್ಧ ದಂಪತಿಗಳಿಗೆ ವಂಚಿಸಿದ ಆರೋಪಿಗಳಾಗಿದ್ದಾರೆ.

ದೀನನಾಥರನ್ನು ಪರಿಚಯ ಮಾಡಿಕೊಂಡ ಮೊದಲ ಆರೋಪಿ ಕೃಷ್ಣ ಯಾನೆ ಕಿಶೋರ, ಅವರ ಬಳಿ ಇರುವ ಸಂಪತ್ತನ್ನು ಅರಿತು ಅದನ್ನು ಲಪಟಾಯಿಸುವ ಉದ್ದೇಶದಿಂದ ಆತ್ಮೀಯನಂತೆ ನಟಿಸಿ, ಆತನ ಪತ್ನಿಗೆ ಕ್ಯಾನ್ಸರ್ ಕಾಯಿಲೆಯಿದೆ ಆಸ್ಪತ್ರೆಗೆ ಹಣಬೇಕು, ದೇವಸ್ಥಾನ ಕಟ್ಟಲು ಹಣಬೇಕು ಹೀಗೆ ಬೇರೆ ಬೇರೆ ನೆಪ ಹೇಳಿ, ಮೋಸದಿಂದ ನಂಬಿಸಿ 2022ರ ಮೇ 26ರಿಂದ ಡಿ.12ರವರೆಗೆ ಬೇರೆ ಬೇರೆ ದಿನಾಂಕಗಳಲ್ಲಿ ಒಟ್ಟು 69,50,000ರೂ. ಹಣವನ್ನು ಲಪಟಾಯಿಸಿದಲ್ಲದೇ, 1ನೇ ಆರೋಪಿಯ ಸ್ನೇಹಿತೆ ಎಂದು ಹೇಳಿ 2ನೇ ಆರೋಪಿತೆ ಶಶಿಕಲಾ ದೀನನಾಥರ ಪತ್ನಿ ಕಲ್ಯಾಣಿಯವರಿಂದ ಜನರಲ್ ಪವರ್ ಆಫ್ ಅಟಾರ್ನಿಯನ್ನು ಮೋಸದಿಂದ ಅವರ ಹೆಸರಿಗೆ ಬರೆಸಿಕೊಂಡು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ಹೊನ್ನಾಳ ಶಾಖೆಯಲ್ಲಿ ಅವರ ಮನೆಯನ್ನು ಅಡಮಾನ ಇರಿಸಿ 15 ಲಕ್ಷ ರೂ. ಸಾಲವನ್ನು ತಮ್ಮ ಸ್ವಂತಕ್ಕಾಗಿ ತೆಗೆದುಕೊಂಡಿದ್ದರು.

ಒಟ್ಟಾರೆಯಾಗಿ ಆರೋಪಿಗಳಿಬ್ಬರು ಸೇರಿ ಒಟ್ಟು 84,50,000 ರೂ. ಹಣವನ್ನು ದೀನನಾಥರಿಂದ ಮೋಸದಿಂದ ಲಪಟಾಯಿಸಿದ್ದರು. ಅಲ್ಲದೇ ಅವರು ಸಹಿ ಮಾಡಿದ ಚೆಕ್ ಬುಕ್, ಮನೆಯ ಟಿವಿ ಇತ್ಯಾದಿಗಳನ್ನು ಕೊಂಡು ಹೋಗಿರುವುದಾಗಿ ದೀನನಾಥರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

16 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

16 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

17 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

19 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

20 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

20 hours ago