ಬ್ರಹ್ಮಾವರ : ಸ್ನೇಹಿತರಂತೆ ನಟಿಸಿದ ಜೋಡಿಯೊಂದು ವೃದ್ಧ ದಂಪತಿಗೆ ನಯವಾದ ಮಾತು ಮತ್ತು ವರ್ತನೆಯಿಂದ 84 ಲಕ್ಷ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾರಕೂರಿನ ಹನೇಹಳ್ಳಿಯಲ್ಲಿ ದೀನನಾಥ (73) ಮತ್ತು ಅವರ ಪತ್ನಿ ಕಲ್ಯಾಣಿ ವಂಚನೆಗೊಳಗಾದವರು.
ಕೃಷ್ಣ ಯಾನೆ ಕಿಶೋರ ಹಾಗೂ ಆತನ ಸ್ನೇಹಿತೆ ಶಶಿಕಲಾ ವೃದ್ಧ ದಂಪತಿಗಳಿಗೆ ವಂಚಿಸಿದ ಆರೋಪಿಗಳಾಗಿದ್ದಾರೆ.
ದೀನನಾಥರನ್ನು ಪರಿಚಯ ಮಾಡಿಕೊಂಡ ಮೊದಲ ಆರೋಪಿ ಕೃಷ್ಣ ಯಾನೆ ಕಿಶೋರ, ಅವರ ಬಳಿ ಇರುವ ಸಂಪತ್ತನ್ನು ಅರಿತು ಅದನ್ನು ಲಪಟಾಯಿಸುವ ಉದ್ದೇಶದಿಂದ ಆತ್ಮೀಯನಂತೆ ನಟಿಸಿ, ಆತನ ಪತ್ನಿಗೆ ಕ್ಯಾನ್ಸರ್ ಕಾಯಿಲೆಯಿದೆ ಆಸ್ಪತ್ರೆಗೆ ಹಣಬೇಕು, ದೇವಸ್ಥಾನ ಕಟ್ಟಲು ಹಣಬೇಕು ಹೀಗೆ ಬೇರೆ ಬೇರೆ ನೆಪ ಹೇಳಿ, ಮೋಸದಿಂದ ನಂಬಿಸಿ 2022ರ ಮೇ 26ರಿಂದ ಡಿ.12ರವರೆಗೆ ಬೇರೆ ಬೇರೆ ದಿನಾಂಕಗಳಲ್ಲಿ ಒಟ್ಟು 69,50,000ರೂ. ಹಣವನ್ನು ಲಪಟಾಯಿಸಿದಲ್ಲದೇ, 1ನೇ ಆರೋಪಿಯ ಸ್ನೇಹಿತೆ ಎಂದು ಹೇಳಿ 2ನೇ ಆರೋಪಿತೆ ಶಶಿಕಲಾ ದೀನನಾಥರ ಪತ್ನಿ ಕಲ್ಯಾಣಿಯವರಿಂದ ಜನರಲ್ ಪವರ್ ಆಫ್ ಅಟಾರ್ನಿಯನ್ನು ಮೋಸದಿಂದ ಅವರ ಹೆಸರಿಗೆ ಬರೆಸಿಕೊಂಡು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ಹೊನ್ನಾಳ ಶಾಖೆಯಲ್ಲಿ ಅವರ ಮನೆಯನ್ನು ಅಡಮಾನ ಇರಿಸಿ 15 ಲಕ್ಷ ರೂ. ಸಾಲವನ್ನು ತಮ್ಮ ಸ್ವಂತಕ್ಕಾಗಿ ತೆಗೆದುಕೊಂಡಿದ್ದರು.
ಒಟ್ಟಾರೆಯಾಗಿ ಆರೋಪಿಗಳಿಬ್ಬರು ಸೇರಿ ಒಟ್ಟು 84,50,000 ರೂ. ಹಣವನ್ನು ದೀನನಾಥರಿಂದ ಮೋಸದಿಂದ ಲಪಟಾಯಿಸಿದ್ದರು. ಅಲ್ಲದೇ ಅವರು ಸಹಿ ಮಾಡಿದ ಚೆಕ್ ಬುಕ್, ಮನೆಯ ಟಿವಿ ಇತ್ಯಾದಿಗಳನ್ನು ಕೊಂಡು ಹೋಗಿರುವುದಾಗಿ ದೀನನಾಥರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…