Featured

ಬ್ರಹ್ಮಾವರ: ವೃದ್ಧ ದಂಪತಿಗೆ 84 ಲಕ್ಷ ರೂ.ವಂಚನೆ ; ಇಬ್ಬರ ವಿರುದ್ಧ ಪ್ರಕರಣ ದಾಖಲು – vishwanews24

ಬ್ರಹ್ಮಾವರ: ವೃದ್ಧ ದಂಪತಿಗೆ 84 ಲಕ್ಷ ರೂ.ವಂಚನೆ- ಇಬ್ಬರ ವಿರುದ್ಧ ಪ್ರಕರಣ ದಾಖಲು

ಬ್ರಹ್ಮಾವರ : ಸ್ನೇಹಿತರಂತೆ ನಟಿಸಿದ ಜೋಡಿಯೊಂದು ವೃದ್ಧ ದಂಪತಿಗೆ ನಯವಾದ ಮಾತು ಮತ್ತು ವರ್ತನೆಯಿಂದ 84 ಲಕ್ಷ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾರಕೂರಿನ ಹನೇಹಳ್ಳಿಯಲ್ಲಿ ದೀನನಾಥ (73) ಮತ್ತು ಅವರ ಪತ್ನಿ ಕಲ್ಯಾಣಿ ವಂಚನೆಗೊಳಗಾದವರು.

ಕೃಷ್ಣ ಯಾನೆ ಕಿಶೋರ ಹಾಗೂ ಆತನ ಸ್ನೇಹಿತೆ ಶಶಿಕಲಾ ವೃದ್ಧ ದಂಪತಿಗಳಿಗೆ ವಂಚಿಸಿದ ಆರೋಪಿಗಳಾಗಿದ್ದಾರೆ.

ದೀನನಾಥರನ್ನು ಪರಿಚಯ ಮಾಡಿಕೊಂಡ ಮೊದಲ ಆರೋಪಿ ಕೃಷ್ಣ ಯಾನೆ ಕಿಶೋರ, ಅವರ ಬಳಿ ಇರುವ ಸಂಪತ್ತನ್ನು ಅರಿತು ಅದನ್ನು ಲಪಟಾಯಿಸುವ ಉದ್ದೇಶದಿಂದ ಆತ್ಮೀಯನಂತೆ ನಟಿಸಿ, ಆತನ ಪತ್ನಿಗೆ ಕ್ಯಾನ್ಸರ್ ಕಾಯಿಲೆಯಿದೆ ಆಸ್ಪತ್ರೆಗೆ ಹಣಬೇಕು, ದೇವಸ್ಥಾನ ಕಟ್ಟಲು ಹಣಬೇಕು ಹೀಗೆ ಬೇರೆ ಬೇರೆ ನೆಪ ಹೇಳಿ, ಮೋಸದಿಂದ ನಂಬಿಸಿ 2022ರ ಮೇ 26ರಿಂದ ಡಿ.12ರವರೆಗೆ ಬೇರೆ ಬೇರೆ ದಿನಾಂಕಗಳಲ್ಲಿ ಒಟ್ಟು 69,50,000ರೂ. ಹಣವನ್ನು ಲಪಟಾಯಿಸಿದಲ್ಲದೇ, 1ನೇ ಆರೋಪಿಯ ಸ್ನೇಹಿತೆ ಎಂದು ಹೇಳಿ 2ನೇ ಆರೋಪಿತೆ ಶಶಿಕಲಾ ದೀನನಾಥರ ಪತ್ನಿ ಕಲ್ಯಾಣಿಯವರಿಂದ ಜನರಲ್ ಪವರ್ ಆಫ್ ಅಟಾರ್ನಿಯನ್ನು ಮೋಸದಿಂದ ಅವರ ಹೆಸರಿಗೆ ಬರೆಸಿಕೊಂಡು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ಹೊನ್ನಾಳ ಶಾಖೆಯಲ್ಲಿ ಅವರ ಮನೆಯನ್ನು ಅಡಮಾನ ಇರಿಸಿ 15 ಲಕ್ಷ ರೂ. ಸಾಲವನ್ನು ತಮ್ಮ ಸ್ವಂತಕ್ಕಾಗಿ ತೆಗೆದುಕೊಂಡಿದ್ದರು.

ಒಟ್ಟಾರೆಯಾಗಿ ಆರೋಪಿಗಳಿಬ್ಬರು ಸೇರಿ ಒಟ್ಟು 84,50,000 ರೂ. ಹಣವನ್ನು ದೀನನಾಥರಿಂದ ಮೋಸದಿಂದ ಲಪಟಾಯಿಸಿದ್ದರು. ಅಲ್ಲದೇ ಅವರು ಸಹಿ ಮಾಡಿದ ಚೆಕ್ ಬುಕ್, ಮನೆಯ ಟಿವಿ ಇತ್ಯಾದಿಗಳನ್ನು ಕೊಂಡು ಹೋಗಿರುವುದಾಗಿ ದೀನನಾಥರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.

Vishwa News 24

Recent Posts

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

3 minutes ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

13 minutes ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

18 minutes ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

33 minutes ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

1 hour ago

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು – vishwanews24

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…

1 hour ago