ಉಡುಪಿ:- ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಬ್ಬು ಬೆಳೆಯುವ ರೈತರ ಏಕೈಕ ಆಶಾಕಿರಣವಾಗಿದ್ದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯು ಕಳೆದ ಹಲವಾರು ವರ್ಷದಿಂದ ಮುಚ್ಚಿದ್ದು, ಇದರಿಂದ ರೈತರಿಗೆ ಬಹಳ ತೊಂದರೆಯಾಗಿದೆ. ಆದ್ದರಿಂದ ಈ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಲು ಸುಮಾರು ೧೦೦ ಕೋಟಿ ಅನುದಾನ ಬೇಕಾಗಿರುದರಿಂದ ಮಾನ್ಯ ಮುಖ್ಯಮಂತ್ರಿಗಳು ಮುಂದಿನ ಬಜೆಟ್ನಲ್ಲಿ ಈ ಅನುದಾನವನ್ನು ಒದಗಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.
ಇದನ್ನೂ ಓದಿ :
ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಅವರ ಅಧಿಕಾರವಧಿಯಲ್ಲಿ ಒದಗಿಸಿದ ೧೨ ಕೋಟಿ ಅನುದಾನದಲ್ಲಿ ರೈತರ ಬಾಕಿ ಉಳಿದ ಮೊತ್ತ ಹಾಗೂ ನೌಕರ ವೇತನಗಳನ್ನು ನೀಡಲಾಗಿತ್ತು. ಅನಂತರ ಯಾವುದೇ ಸರಕಾರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪ್ರಸ್ತುತ ವಾರಹಿ ನೀರನ್ನು ಕೂಡಾ ತಡೆಹಿಡಿಯಲಾಗಿದೆ. ಇದರಿಂದ ಈ ಭಾಗದಲ್ಲಿ ಅನೇಕ ಕೃಷಿ ಭೂಮಿ ಹಡಿಲು ಬೀಳುವಂತಾಗಿದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ಒದಗಿಸಿ ಕಬ್ಬು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಅಡ್ವಕೇಟ್ ಎಲ್ಲೂರು ಶಶಿಧರ ಶೆಟ್ಟಿ, ಉಪಾಧ್ಯಕ್ಷರಾದ ಶೇಖರ ಕೋಟ್ಯಾನ್ ಬ್ರಹ್ಮಾವರ, ಕಾರ್ಯಧ್ಯಕ್ಷರಾದ ಪ್ರಕಾಶ್ ಪೂಜಾರಿ ಕೆರ್ವಾಶೆ, ಜಿಲ್ಲಾ ಕಿಸಾನ್ ಸಂಚಾಲಕರಾದ ಭಾಸ್ಕರ ಶೆಟ್ಟಿ ಕುಂದಾಪುರ, ರಾಜ್ಯ ಕಿಸಾನ್ ಕಾರ್ಯದರ್ಶಿಗಳಾದ ಉದಯ ಶೆಟ್ಟಿ ಕಾರ್ಕಳ, ನಾಗಪ್ಪ ಕೊಟ್ಟಾರಿ ವಂಡ್ಸೆ, ರಾಯ್ಸ್ ಮರ್ವಿನ್ ಫೆರ್ನಾಂಡಿಸ್ ಉದ್ಯಾವರ ಹಾಗೂ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಎರಡು ಜಿಲ್ಲೆಯ ರೈತರ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ :
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…