Featured

ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ನೀಡುವಂತೆ, ಮುಖ್ಯಮ0ತ್ರಿಗೆ ಕಿಸಾನ್ ಕಾಂಗ್ರೆಸ್ ಮನವಿ – Vishwanews24

ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ನೀಡುವಂತೆ, ಮುಖ್ಯಮ0ತ್ರಿಗೆ ಕಿಸಾನ್ ಕಾಂಗ್ರೆಸ್ ಮನವಿ – Vishwanews24

ಉಡುಪಿ:- ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಬ್ಬು ಬೆಳೆಯುವ ರೈತರ ಏಕೈಕ ಆಶಾಕಿರಣವಾಗಿದ್ದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯು ಕಳೆದ ಹಲವಾರು ವರ್ಷದಿಂದ ಮುಚ್ಚಿದ್ದು, ಇದರಿಂದ ರೈತರಿಗೆ ಬಹಳ ತೊಂದರೆಯಾಗಿದೆ. ಆದ್ದರಿಂದ ಈ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಲು ಸುಮಾರು ೧೦೦ ಕೋಟಿ ಅನುದಾನ ಬೇಕಾಗಿರುದರಿಂದ ಮಾನ್ಯ ಮುಖ್ಯಮಂತ್ರಿಗಳು ಮುಂದಿನ ಬಜೆಟ್‌ನಲ್ಲಿ ಈ ಅನುದಾನವನ್ನು ಒದಗಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.

ಇದನ್ನೂ ಓದಿ :

ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಅವರ ಅಧಿಕಾರವಧಿಯಲ್ಲಿ ಒದಗಿಸಿದ ೧೨ ಕೋಟಿ ಅನುದಾನದಲ್ಲಿ ರೈತರ ಬಾಕಿ ಉಳಿದ ಮೊತ್ತ ಹಾಗೂ ನೌಕರ ವೇತನಗಳನ್ನು ನೀಡಲಾಗಿತ್ತು. ಅನಂತರ ಯಾವುದೇ ಸರಕಾರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪ್ರಸ್ತುತ ವಾರಹಿ ನೀರನ್ನು ಕೂಡಾ ತಡೆಹಿಡಿಯಲಾಗಿದೆ. ಇದರಿಂದ ಈ ಭಾಗದಲ್ಲಿ ಅನೇಕ ಕೃಷಿ ಭೂಮಿ ಹಡಿಲು ಬೀಳುವಂತಾಗಿದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ಒದಗಿಸಿ ಕಬ್ಬು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಅಡ್ವಕೇಟ್ ಎಲ್ಲೂರು ಶಶಿಧರ ಶೆಟ್ಟಿ, ಉಪಾಧ್ಯಕ್ಷರಾದ ಶೇಖರ ಕೋಟ್ಯಾನ್ ಬ್ರಹ್ಮಾವರ, ಕಾರ್ಯಧ್ಯಕ್ಷರಾದ ಪ್ರಕಾಶ್ ಪೂಜಾರಿ ಕೆರ್ವಾಶೆ, ಜಿಲ್ಲಾ ಕಿಸಾನ್ ಸಂಚಾಲಕರಾದ ಭಾಸ್ಕರ ಶೆಟ್ಟಿ ಕುಂದಾಪುರ, ರಾಜ್ಯ ಕಿಸಾನ್ ಕಾರ್ಯದರ್ಶಿಗಳಾದ ಉದಯ ಶೆಟ್ಟಿ ಕಾರ್ಕಳ, ನಾಗಪ್ಪ ಕೊಟ್ಟಾರಿ ವಂಡ್ಸೆ, ರಾಯ್ಸ್ ಮರ್ವಿನ್ ಫೆರ್ನಾಂಡಿಸ್ ಉದ್ಯಾವರ ಹಾಗೂ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಎರಡು ಜಿಲ್ಲೆಯ ರೈತರ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago