ಬ್ರಹ್ಮಾವರ: ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಟೆಂಡರ್ ಪ್ರಕ್ರಿಯೆಯನ್ನು ಸರಕಾರದ ಸೂಚನೆಯ ಪ್ರಕಾರವೇ ನಿರ್ವ ಹಿಸಲಾಗಿದೆ. ನಿರುಪಯುಕ್ತ ಯಂತ್ರೋ ಪಕರಣಗಳ ಮಾರಾಟದಿಂದ ಬಂದ ಹಣದಿಂದ ಕಾರ್ಖಾನೆಯ ಎಲ್ಲ ಸಾಲವನ್ನು ಪಾವತಿಸಿದ್ದು ಸಕ್ಕರೆ ಕಾರ್ಖಾನೆ ಸಾಲ ಮುಕ್ತವಾಗಿದೆ. ಯಾವುದೇ ತನಿಖೆಗೆ ಸಹಕಾರ ನೀಡುತ್ತೇವೆ ಎಂದು ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
20 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುಜರಿ ಮಾರಾಟದಿಂದ ಬಂದ ಹಣದಿಂದ ಕಾರ್ಖಾನೆಯ ವಿವಿಧ ಬಾಕಿ ಮತ್ತು ಸಾಲಗಳಾದ ವಾಣಿಜ್ಯ ಇಲಾಖೆಯ ತೆರಿಗೆ ಬಾಕಿ 1,75,65,423 ರೂ., ಕಾರ್ಮಿಕರ ಬಾಕಿ ಪಾವತಿ 3,26,75,866 ರೂ., ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ಸಾಲ ಮರುಪಾವತಿ 56 ಲಕ್ಷ ರೂ., ಎಸ್ಸಿಡಿಸಿಸಿ ಬ್ಯಾಂಕ್ ಸಾಲ ಬಾಕಿ 78.90 ಲಕ್ಷ ರೂ. ಹಾರಾಡಿ ಗ್ರಾ.ಪಂ. ತೆರಿಗೆ ಬಾಕಿ 4,35,350 ರೂ., ಭವಿಷ್ಯ ನಿ ಧಿಯ ಬಾಕಿ 23,71,73 ರೂ. ಪಾವತಿಸಿ ಸಂಪೂರ್ಣ ಸಾಲ ಮುಕ್ತವನ್ನಾಗಿಸಿರುತ್ತೇವೆ. ಕಾಂಗ್ರೆಸ್ನ ಆರೋಪ ರಾಜಕೀಯ ಪ್ರೇರಿತ ಎಂದಿದ್ದಾರೆ.
ಈ ಹಿಂದಿನ ಆಡಳಿತ ಮಂಡಳಿ ಮಾಡಿರುವ ಸಾಲ ಮತ್ತು ಬಾಕಿಯನ್ನು ಪಾವತಿಸಿ ಕಾರ್ಖಾನೆಯ ಜಾಗವನ್ನು ಉಳಿಸಿರುವ ತೃಪ್ತಿ ಇದೆ ಎಂದಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…