ಬ್ರಹ್ಮಾವರ: ಹೂಡಿಕೆ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಮ್ರಗೋಡು ಗ್ರಾಮದ ಅರುಣಾ ಆಚಾರ್ಯ(30) ಹಣ ಕಳೆದುಕೊಂಡವರು. ಇವರ ಇನ್ ಸ್ಟಾಗ್ರಾಮ್ ಖಾತೆಗೆ 2024ರ ಜು.22ರಂದು ಕಂಪೆನಿಯೊಂದರ ಹೆಸರಿನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಬಗ್ಗೆ ಜಾಹಿರಾತು ಬಂದಿದ್ದು ಈ ಬಗ್ಗೆ ಅರುಣಾ ಆಸಕ್ತಿ ಹೊಂದಿ ಆರೋಪಿಯು ನೀಡಿದ್ದ ಮೊಬೈಲ್ ಸಂಖ್ಯೆ ಸಂಪರ್ಕಿಸಿದಾಗ ಆರೋಪಿಯು ವಾಟ್ಸಾಪ್ ಮೂಲಕ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಬಗ್ಗೆ ತರಬೇತಿ ನೀಡಿದ್ದ.
ಮೊದ ಮೊದಲು ಅರುಣಾ ಹೂಡಿಕೆ ಮಾಡಿದ ಹಣಕ್ಕೆ ಅಧಿಕ ಲಾಭವನ್ನು ನೀಡಿದ್ದು, ಇದನ್ನು ನಂಬಿ ಅರುಣಾ 2024ರ ಸೆಪ್ಟೆಂಬರ್ನಿಂದ 2024ರ ಡಿ.19ರವರೆಗೆ ತನ್ನ ಖಾತೆಗಳಿಂದ ಆರೋಪಿಗಳ ಖಾತೆಗೆ ಹಂತಹಂತವಾಗಿ ಒಟ್ಟು 15,95,005.90ರೂ. ಹಣವನ್ನು ವರ್ಗಾವಣೆ ಮಾಡಿ ಹೂಡಿಕೆ ಮಾಡಿದ್ದರು. ಆದರೆ ಆರೋಪಿಗಳು ಈ ಹಣವನ್ನು ಈವರೆಗೆ ವಾಪಾಸ್ಸು ನೀಡದೇ ವಂಚಿಸಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…