Featured

ಬ್ರಾಹ್ಮಣರು ಅರ್ಹರಾಗಿದ್ದು, ಸಮಾಜಮುಖಿಗಳಾಗಿದ್ದರೆ ಸಿ.ಎಂ ಆಗಲು  ಯಾವುದೇ ಅಡ್ಡಿಯಿಲ್ಲ : ಸುಬುಧೇಂದ್ರತೀರ್ಥ ಸ್ವಾಮೀಜಿ – Vishwanews24

ಬ್ರಾಹ್ಮಣರು ಅರ್ಹರಾಗಿದ್ದು, ಸಮಾಜಮುಖಿಗಳಾಗಿದ್ದರೆ ಸಿ.ಎಂ ಆಗಲು  ಯಾವುದೇ ಅಡ್ಡಿಯಿಲ್ಲ : ಸುಬುಧೇಂದ್ರತೀರ್ಥ ಸ್ವಾಮೀಜಿ

ಬಾಗಲಕೋಟೆ: ‘ಬ್ರಾಹ್ಮಣರು ಅರ್ಹರಾಗಿದ್ದು, ಸಮಾಜಮುಖಿಗಳಾಗಿದ್ದರೆ ಮುಖ್ಯಮಂತ್ರಿಯಾಗಲು ಯಾವುದೇ ಅಡ್ಡಿಯಿಲ್ಲ’ ಎಂದು ಮಂತ್ರಾಲಯದ ಸುಬುಧೇಂದ್ರತೀರ್ಥ ಸ್ವಾಮೀಜಿ ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ,‘ಬ್ರಾಹ್ಮಣರು ಬೇರೆ ಸಮಾಜದ ವಿರೋಧಿಯಲ್ಲ. ಎಲ್ಲರ ಕ್ಷೇಮ ಕೋರುವ ಸಮಾಜ’ ಎಂದು ಹೇಳಿದರು.

‘ಬ್ರಾಹ್ಮಣ ಸಮುದಾಯವನ್ನು ಯಾರೇ ನಿಂದಿಸಿದರೂ ಖಂಡಿಸುತ್ತೇವೆ. ಯಾರೂ, ಯಾವ ಸಮುದಾಯವನ್ನೂ ತೆಗಳಬಾರದು. ಒಂದು ಸಮುದಾಯದವರು ಯಾವುದೇ ಮುಖ್ಯ ಪದವಿ ಅಲಂಕರಿಸಬಾರದು ಎಂಬ ಹೇಳಿಕೆ ಸಂವಿಧಾನ ವಿರೋಧಿ. ಅದು ಪ್ರಜಾಪ್ರಭುತ್ವ ಆಗಲ್ಲ;ನಿರಂಕುಶ ಪ್ರಭುತ್ವ’ ಎಂದರು.

‘ಹಿಂದುತ್ವ ವಿರೋಧಿಸುವುದು ಅರ್ಥಹೀನ. ಸಿದ್ದರಾಮಯ್ಯ ಅವರು ತಾವು ಹಿಂದೂ ಎನ್ನುತ್ತಾರೆ. ಆದರೆ, ಹಿಂದುತ್ವ ಒಪ್ಪುವುದಿಲ್ಲ. ತಾಯಿ ಅನ್ನೋದು, ನಂತರ ಟೀಕಿಸುವುದು ಅಪಹಾಸ್ಯ’ ಎಂದು ಹೇಳಿದರು.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

51 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

60 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago