ನವದೆಹಲಿ:ಬ್ರಿಟನ್ ನಲ್ಲಿ ರೂಪಾಂತರಗೊಂಡ ನೂತನ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವುದರಿಂದ ಭಾರತ ಮುಂಜಾಗ್ರತಾ ಕ್ರಮವಾಗಿ ಬ್ರಿಟನ್ ನಿಂದ ಆಗಮಿಸುವ ಎಲ್ಲಾ ವಿಮಾನಗಳಿಗೆ ಡಿಸೆಂಬರ್ 31ರವರೆಗೆ ನಿರ್ಬಂಧ ವಿಧಿಸಿರುವುದಾಗಿ ವರದಿ ತಿಳಿಸಿದೆ.
ಬ್ರಿಟನ್ ನಲ್ಲಿ ಕೋವಿಡ್ ಹೊಸ ಪ್ರಬೇಧ ಕ್ಷಿಪ್ರವಾಗಿ ಹರಡುತ್ತಿದ್ದು, ದೇಶದಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನ ಸಂಚಾರವನ್ನು ಡಿಸೆಂಬರ್ 31ರವರೆಗೂ ನಿಷೇಧಿಸಲು ನಿರ್ಧಾರ ಕೈಗೊಂಡಿರುವುದಾಗಿ ಭಾರತ ಹೇಳಿದೆ.
ಭಾರತದಿಂದ ಬ್ರಿಟನ್ ಗೆ ತೆರಳುವ ವಿಮಾನ ಸಂಚಾರವನ್ನೂ ಕೂಡಾ ಈ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬ್ರಿಟನ್ ನಿಂದ ನಾಳೆ ಮಧ್ಯರಾತ್ರಿ ಭಾರತಕ್ಕೆ ಆಗಮಿಸಲಿರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆರ್ ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗುವುದು ಎಂದು ವಿವರಿಸಿದೆ.
“ಬ್ರಿಟನ್ನಲ್ಲಿರುವ ಸದ್ಯದ ಪರಿಸ್ಥಿತಿಯನ್ನು ಪರಿಗಣಿಸಿ, ಅಲ್ಲಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31ರ ರಾತ್ರಿ 11.59ರವರೆಗೆ ತಾತ್ಕಾಲಿಕವಾಗಿ ರದ್ದುಗೊಳಿಸಲು ಭಾರತ ಸರಕಾರ ನಿರ್ಧರಿಸಿದೆ. ಡಿಸೆಂಬರ್ 22ರ ರಾತ್ರಿ 11.59ರಿಂದ ಈ ನಿಷೇಧ ಅನ್ವಯವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ಬ್ರಿಟನ್ ನಲ್ಲಿ ಪತ್ತೆಯಾಗಿರುವ ಈ ಹೊಸ ವಿಧದ ವೈರಸ್ ಕುರಿತು ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದೆ. ಯಾರೂ ಭಯ ಪಡುವ ಅಗತ್ಯವಿಲ್ಲ. ಸರ್ಕಾರ ಮುಂಜಾಗ್ರತೆಯಿಂದ ಕೆಲಸ ಮಾಡುತ್ತಿದೆ. ಕಳೆದ ಒಂದು ವರ್ಷದಲ್ಲಿ, ನೀವೇ ಕಂಡಂತೆ ಜನರ ರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರ ಸಾಕಷ್ಟು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಆತಂಕ ಪಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…