ಉಡುಪಿ: ಬ್ರಿಟನ್ನಲ್ಲಿ ಹೊಸ ರೂಪದ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರಿಂದ ಆತಂಕ ಸೃಷ್ಟಿಯಾಗಿದೆ. ಈ ಮಧ್ಯೆ ಉಡುಪಿ ಜಿಲ್ಲೆಗೆ ಬ್ರಿಟನ್ನಿಂದ 8 ಮಂದಿ ಆಗಮಿಸಿದ್ದಾರೆ. ಎಲ್ಲರನ್ನೂ ಮನೆಗಳಲ್ಲಿಯೇ ದಿಗ್ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಬ್ರಿಟನ್ನಿಂದ ಉಡುಪಿ ಜಿಲ್ಲೆಗೆ ಆಗಮಿಸಿದ 8 ಮಂದಿಯ ಗಂಟಲ ದ್ರವವನ್ನು ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯ ವರದಿ ನಿರೀಕ್ಷೆಯಲ್ಲಿದೆ. ಬ್ರಿಟನ್ನಿಂದ ಆಗಮಿಸಿದವರಲ್ಲಿ ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿದ್ದಾರೆ ಎಂದು ಡಿಎಚ್ಒ ಮಾಹಿತಿ ನೀಡಿದ್ದಾರೆ.
ಬ್ರಿಟನ್ನಲ್ಲಿ ಹೊಸ ವಿಧದ ಕೊರೋನಾ ಸೋಂಕು ಪತ್ತೆಯಾಗಿದ್ದು, ಅತಿ ವೇಗವಾಗಿ ಹರಡಬಲ್ಲ ಇದರ ಲಕ್ಷಣದಿಂದಾಗಿ ಆತಂಕ ಎದುರಾಗಿದೆ. ಈ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ದೇಶಗಳು ಬ್ರಿಟನ್ನಿಂದ ಬರುವ ವಿಮಾನಗಳನ್ನು ಸ್ಥಗಿತಗೊಳಿಸಿವೆ. ಈ ನಡುವೆ ಭಾರತದಲ್ಲೂ ಡಿ. 31ರವರೆಗೆ ಬ್ರಿಟನ್ನಿಂದ ಬರುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಈಗಾಗಲೇ ಬ್ರಿಟನ್ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ, ದಿಲ್ಲಿ ಮತ್ತು ಕೋಲ್ಕತಾದಲ್ಲಿ 7 ಪ್ರಯಾಣಿಕರಲ್ಲಿ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…