Featured

ಬ್ರಿಟನ್‌ನಲ್ಲಿ ಹೊಸ ರೂಪದ ಕೊರೋನಾ ವೈರಸ್ ಪತ್ತೆ -ಉಡುಪಿಗೂ ಬ್ರಿಟನ್ನಿಂದ ಆಗಮಿಸಿದ ಎಂಟು ಮಂದಿ- ಪರೀಕ್ಷೆಯ ವರದಿ ನಿರೀಕ್ಷೆಯಲ್ಲಿ -vishwanews24

ಉಡುಪಿ: ಬ್ರಿಟನ್‌ನಲ್ಲಿ ಹೊಸ ರೂಪದ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರಿಂದ ಆತಂಕ ಸೃಷ್ಟಿಯಾಗಿದೆ. ಈ ಮಧ್ಯೆ ಉಡುಪಿ ಜಿಲ್ಲೆಗೆ ಬ್ರಿಟನ್‌ನಿಂದ 8 ಮಂದಿ ಆಗಮಿಸಿದ್ದಾರೆ. ಎಲ್ಲರನ್ನೂ ಮನೆಗಳಲ್ಲಿಯೇ ದಿಗ್ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಬ್ರಿಟನ್‌ನಿಂದ ಉಡುಪಿ ಜಿಲ್ಲೆಗೆ ಆಗಮಿಸಿದ 8 ಮಂದಿಯ ಗಂಟಲ ದ್ರವವನ್ನು ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯ ವರದಿ ನಿರೀಕ್ಷೆಯಲ್ಲಿದೆ. ಬ್ರಿಟನ್‌ನಿಂದ ಆಗಮಿಸಿದವರಲ್ಲಿ ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿದ್ದಾರೆ ಎಂದು ಡಿಎಚ್ಒ ಮಾಹಿತಿ ನೀಡಿದ್ದಾರೆ.
ಬ್ರಿಟನ್‌ನಲ್ಲಿ ಹೊಸ ವಿಧದ ಕೊರೋನಾ ಸೋಂಕು ಪತ್ತೆಯಾಗಿದ್ದು, ಅತಿ ವೇಗವಾಗಿ ಹರಡಬಲ್ಲ ಇದರ ಲಕ್ಷಣದಿಂದಾಗಿ ಆತಂಕ ಎದುರಾಗಿದೆ. ಈ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ದೇಶಗಳು ಬ್ರಿಟನ್‌ನಿಂದ ಬರುವ ವಿಮಾನಗಳನ್ನು ಸ್ಥಗಿತಗೊಳಿಸಿವೆ. ಈ ನಡುವೆ ಭಾರತದಲ್ಲೂ ಡಿ. 31ರವರೆಗೆ ಬ್ರಿಟನ್‌ನಿಂದ ಬರುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಈಗಾಗಲೇ ಬ್ರಿಟನ್‌ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ, ದಿಲ್ಲಿ ಮತ್ತು ಕೋಲ್ಕತಾದಲ್ಲಿ 7 ಪ್ರಯಾಣಿಕರಲ್ಲಿ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago