ಬೆಂಗಳೂರು,: ಬ್ರಿಟನ್ನಿಂದ ಕರ್ನಾಟಕಕ್ಕೆ ಬಂದ 1,614 ಜನರನ್ನು ಈವರೆಗೆ ತಪಾಸಣೆಗೆ ಒಳಪಡಿಸಲಾಗಿದ್ದು, ಅವರ ಪೈಕಿ 26 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕೊರೊನಾ ಸೋಂಕು ಪತ್ತೆ ಆದ ಎಲ್ಲರಿಗೂ ಸರ್ಕಾರದ ಸುಪರ್ದಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಯಾರಿಗೂ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ವಿದೇಶದಿಂದ ಬಂದವರರಲ್ಲಿ ಅನೇಕರು ಇನ್ನೂ ಪತ್ತೆಯಾಗಿಲ್ಲ, ಅದರಲ್ಲೂ ಬ್ರಿಟನ್ನಿಂದ ಬಂದವರಿದ್ದಾರೆ. ಹಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡುವ ಕೆಲಸ ಮುಂದುವರಿದೆ” ಎಂದರು.
ಇನ್ನು “ಪರೀಕ್ಷೆಗೆ ಒಳಗಾಗದಿರುವವರು ಸರ್ಕಾರದ ಜೊತೆ ಸಹಕರಿಸಬೇಕು. ಅದು ಅವರ ಜವಾಬ್ದಾರಿಯಾಗಿದೆ. ತಲೆಮರೆಸಿಕೊಂಡು ಓಡಾಡುವುದು ಅಪರಾಧ. ಹಾಗೆಯೇ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ ತಲೆಮರೆಸಿಕೊಂಡವರ ಪತ್ತೆ ಕುರಿತು ಗೃಹ ಸಚಿವರ ಜೊತೆ ಚರ್ಚೆ ನಡೆಸುತ್ತೇನೆ” ಎಂದು ಹೇಳಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…