ಬೆಂಗಳೂರು,: ಬ್ರಿಟನ್ನಿಂದ ಕರ್ನಾಟಕಕ್ಕೆ ಬಂದ 1,614 ಜನರನ್ನು ಈವರೆಗೆ ತಪಾಸಣೆಗೆ ಒಳಪಡಿಸಲಾಗಿದ್ದು, ಅವರ ಪೈಕಿ 26 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕೊರೊನಾ ಸೋಂಕು ಪತ್ತೆ ಆದ ಎಲ್ಲರಿಗೂ ಸರ್ಕಾರದ ಸುಪರ್ದಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಯಾರಿಗೂ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ವಿದೇಶದಿಂದ ಬಂದವರರಲ್ಲಿ ಅನೇಕರು ಇನ್ನೂ ಪತ್ತೆಯಾಗಿಲ್ಲ, ಅದರಲ್ಲೂ ಬ್ರಿಟನ್ನಿಂದ ಬಂದವರಿದ್ದಾರೆ. ಹಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡುವ ಕೆಲಸ ಮುಂದುವರಿದೆ” ಎಂದರು.
ಇನ್ನು “ಪರೀಕ್ಷೆಗೆ ಒಳಗಾಗದಿರುವವರು ಸರ್ಕಾರದ ಜೊತೆ ಸಹಕರಿಸಬೇಕು. ಅದು ಅವರ ಜವಾಬ್ದಾರಿಯಾಗಿದೆ. ತಲೆಮರೆಸಿಕೊಂಡು ಓಡಾಡುವುದು ಅಪರಾಧ. ಹಾಗೆಯೇ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ ತಲೆಮರೆಸಿಕೊಂಡವರ ಪತ್ತೆ ಕುರಿತು ಗೃಹ ಸಚಿವರ ಜೊತೆ ಚರ್ಚೆ ನಡೆಸುತ್ತೇನೆ” ಎಂದು ಹೇಳಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…