Featured

ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಹೀರೋ ಮಾಡ್ತಿದ್ದಾರೆ: ಸೊರಕೆ – Vishwanews24

ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಹೀರೋ ಮಾಡ್ತಿದ್ದಾರೆ: ಸೊರಕೆ

ಕಡಬ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿ ಜೀವ ಬಲಿದಾನ ಮಾಡಿದ ನೈಜ ಹೋರಾಟಗಾರರನ್ನು ಮರೆ ಮಾಚಿ ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಬಿಜೆಪಿಯವರು ಹೀರೋ ಮಾಡಲು ಹೊರಟು ದೇಶದ ಇತಿಹಾಸವನ್ನು ತಿರುಚುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಆರೋಪಿಸಿದರು.

ಕಡಬ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಆಲಂಕಾರಿನಿಂದ ಕಡಬದವರೆಗೆ ಶನಿವಾರ ಸಂಜೆ ನಡೆದ ಕಾಂಗ್ರೆಸ್‌ನ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪದಲ್ಲಿ ಅವರು ಮಾತನಾಡಿದರು.

ಎಲ್ಲ ಜಾತಿ, ಮತ, ಧರ್ಮಗಳವರನ್ನು ಒಗ್ಗೂಡಿಸಿಕೊಂಡು ಸುಂದರ ಭಾರತ ಕಟ್ಟುವ ಜಾತ್ಯತೀತ ಪರಂಪರೆಗೆ ಎಳ್ಳು ನೀರು ಬಿಟ್ಟು ಕೋಮ ಸಂಘರ್ಷದ ಮೂಲಕ ದೇಶ ಒಡೆಯುವ ಕೆಲಸ ಮಾಡುತ್ತಿರುವ ಬಿಜೆಪಿಯವರು ಜನರಿಗೆ ಸುಳ್ಳು ಇತಿಹಾಸವನ್ನು ಬೋಧಿಸುತ್ತಿದ್ದಾರೆ. ಇನ್ನು ಕೆಲವು ವರ್ಷ ಕಳೆದರೆ 2014ರಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕವೇ ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳಿ ಜನರನ್ನು ದಾರಿ ತಪ್ಪಿಸಿದರೆ ಆಶ್ಚರ್ಯವಿಲ್ಲ ಎಂದು ಲೇವಡಿ ಮಾಡಿದರು.

ಹಿಜಾಬ್ ವಿವಾದ: ‘ಸುಪ್ರೀಂ ಕೋರ್ಟ್’ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್..ಸೆ.5ಕ್ಕೆ ವಿಚಾರಣೆ ಮುಂದೂಡಿಕೆ -Vishwanews24

ದಿಕ್ಸೂಚಿ ಭಾಷಣ ಮಾಡಿದ ಕೆಪಿಸಿಸಿ ವಕ್ತಾರ ನಿಕೇತ್‌ ರಾಜ್‌ ಮೌರ್ಯ, ಈ ದೇಶದಲ್ಲಿ ಪ್ರೀತಿ , ಸೌಹಾರ್ದ, ಶಾಂತಿಯಿಂದ ಮಾತ್ರ ನಾಡು ಕಟ್ಟಲು ಸಾಧ್ಯ, ಸಂಘರ್ಷದಿಂದ ಸಾಧನೆ ಮಾಡಲು ಸಾಧ್ಯವಿಲ್ಲ, ಭಾರತ ಸರ್ವ ಜನಾಂಗದ ಶಾಂತಿಯ ತೋಟವಾಗಿರುವುದರಿಂದ ಜಗತ್ತಿನಲ್ಲಿ ಗೌರವ ಪ್ರಾಪ್ತಿಯಾಗಿದೆ. ಮಹಾತ್ಮ ಗಾಂಧೀಜಿವರನ್ನು ಮರೆತರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ಹೇಳಿದರು.

ಕೆಪಿಸಿಸಿ ಸುಳ್ಯ ಬ್ಲಾಕ್‌ ಉಸ್ತುವಾರಿ ಕೃಷ್ಣಪ್ಪ ಜಿ., ಕಡಬ ಬ್ಲಾಕ್‌ ಉಸ್ತುವಾರಿ ನಂದ ಕುಮಾರ್‌, ಮುಖಂಡರಾದ ವೆಂಕಪ್ಪ ಗೌಡ ಮಾಚಿಲ, ಡಾ. ರಘು, ಪಿ. ಪಿ. ವರ್ಗೀಸ್‌, ಸರ್ವೋತ್ತಮ ಗೌಡ, ಎಚ್‌. ಮಹಮ್ಮದಾಲಿ, ವಿಜಯ ಕುಮಾರ್‌ ರೈ ಕರ್ಮಾಯಿ, ಸೈಮನ್‌ ಸಿ. ಜೆ, ಬಾಲಕೃಷ್ಣ ಗೌಡ ಬಳ್ಳೇರಿ, ರಾಯ್‌ ಅಬ್ರಹಾಂ, ಸತೀಶ್‌ ಕುಮಾರ್‌ ಕಡೆಂಜಿ, ಎಚ್‌. ಕೆ. ಇಲ್ಯಾಸ್‌, ಉಷಾ ಅಂಚನ್‌, ಧನಂಜಯ ಅಡ್ಪಂಗಾಯ, ಪಿ. ಸಿ. ಜಯರಾಮ, ಭರತ್‌ ಮುಂಡೋಡಿ, ಕೆ. ಪಿ. ತೋಮಸ್‌, ಶರೀಫ್‌ ಎ. ಎಸ್‌., ಶೀನಪ್ಪ ಗೌಡ ಬೈತಡ್ಕ, ದಿವಾಕರ ಗೌಡ, ವಿಜಯ ಕುಮಾರ್‌ ಸೊರಕೆ, ಅಶೋಕ್‌ ನೆಕ್ರಾಜೆ, ಯತೀಶ್‌ ಬಾನಡ್ಕ, ಕೆ. ಎಂ. ಹನೀಫ್‌, ಸತೀಶ್‌ ನಾೖಕ್‌ ಮೇಲಿನ ಮನೆ, ಆಶಾ ಲಕ್ಷ್ಮಣ, ನೀಲಾವತಿ ಶಿವರಾಮ್‌, ಸುದರ್ಶನ ಸವಣೂರು, ಫೈಝಲ್‌ ಮತ್ತಿತರರು ಉಪಸ್ಥಿತರಿದ್ದರು.

ಕಡಬ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಧೀರ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಯುವ ಕಾಂಗ್ರೆಸ್‌ ಅಧ್ಯಕ್ಷ ಅಭಿಲಾಷ್‌ ಪಿ. ಕೆ. ವಂದಿಸಿದರು. ಅಶ್ರಫ್‌ ಶೇಡಿಗುಂಡಿ ಕಾರ್ಯಕ್ರಮ ನಿರೂಪಿಸಿದರು. ಲಿವಾ ಮಿಸ್​ ದಿವಾ ಯೂನಿವರ್ಸ್​ 2022 ಕಿರೀಟವನ್ನು ಮುಡುಗೇರಿಸಿಕೊಂಡ ಮಂಗಳೂರು ಮೂಲದ ದಿವಿತಾ ರೈ – Vishwanews24 

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

16 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

16 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

17 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

17 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

17 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

17 hours ago