Featured

ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾ‌ರ್ – vishwanews24

ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾ‌ರ್

ಬೆಂಗಳೂರು :: ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶ ದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ. ಇಂತಹ ಗೋಮುಖ ವ್ಯಾಘ್ರಗಳಿಂದ ದೇಶವನ್ನು ನಾವೆಲ್ಲರೂ ರಕ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ತೊಡಗಿಕೊಂಡ ರೀತಿಯನ್ನು ಯುವ ಪೀಳಿಗೆಗೆ ತಿಳಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ 6.5 ಲಕ್ಷ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ. ಪಕ್ಷದ ಸದಸ್ಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂಬುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಅದೇ ಶಾಮಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳವಳಿ ಹತ್ತಿಕ್ಕುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು. ಅಂತಹವರ ಹಿಂಬಾಲಕರು ಈಗ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ವಿಪರ್ಯಾಸ ಎಂದರು.

ಮಹಾತ್ಮಾಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿದ್ದಕ್ಕೆ 100 ವರ್ಷಗಳಾಗುತ್ತಿವೆ. ಅದಕ್ಕಾಗಿ ವಿನೂತನ ರೀತಿಯ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

4 hours ago